ಗಣರಾಜ್ಯೋತ್ಸವ ಪರೇಡ್: ದ್ವೀತಿಯ ಸ್ಥಾನ ಪಡೆದುಕೊಂಡ ಕರ್ನಾಟಕದ ಸ್ತಬ್ಧಚಿತ್ರ

Prasthutha|

- Advertisement -

ಹೊಸದಿಲ್ಲಿ: ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಿದ್ದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ.
ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತ ಸ್ತಬ್ಧಚಿತ್ರ ಪ್ರಥಮ ಸ್ಥಾನ ಪಡೆದಿದ್ದು, ಮೇಘಾಲಯದ ಮಹಿಳೆಯರ ಸಹಕಾರ ಸಂಘ ಹಾಗೂ ರಾಜ್ಯದ ಸುವರ್ಣ ಮಹೋತ್ಸವ ಸಂಭ್ರಮ ಬಿಂಬಿಸುವ ಸ್ತಬ್ಧಚಿತ್ರ ತೃತೀಯ ಸ್ಥಾನಕ್ಕೆ ಪಾತ್ರವಾಗಿದೆ.

ಕರ್ನಾಟಕದ ಸ್ತಬ್ಧಚಿತ್ರವು ಕರಕುಶಲ ಕಲೆಯ ವೈಭವವನ್ನು ಬಿಂಬಿಸಿ ಗಮನ ಸೆಳೆದಿತ್ತು. ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಘೋಷಿಸಿದೆ.

- Advertisement -

‘ವಂದೇ ಭಾರತಮ್’ ನೃತ್ಯ ತಂಡವು ವಿಶೇಷ ಬಹುಮಾನ ಪಡೆದಿದೆ. ಹುಬ್ಬಳ್ಳಿಯ ಮಯೂರ ಭರತ ನೃತ್ಯ ಅಕಾಡೆಮಿಯ ನೃತ್ಯಪಟುಗಳು ಈ ತಂಡದಲ್ಲಿ ಭಾಗವಹಿಸಿದ್ದರು.

ಕೇಂದ್ರದ ವಿವಿಧ ಇಲಾಖೆಗಳ ವಿಭಾಗದಲ್ಲಿ ಶಿಕ್ಷಣ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯಗಳ ಸ್ತಬ್ಧಚಿತ್ರಗಳು ವಿಶೇಷ ಬಹುಮಾನ ಪಡೆದಿವೆ.

ಪಥ ಸಂಚಲನದಲ್ಲಿ ಭಾಗವಹಿಸಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಹಾಗೂ ನೌಕಾದಳದ ಸಿಬ್ಬಂದಿಗೆ ವಿಶೇಷ ಬಹುಮಾನ ನೀಡಲಾಗಿದೆ.

ಕೇಂದ್ರದ ಲೋಕೋಪಯೋಗಿ ಇಲಾಖೆಯ ಸುಭಾಷ್-125 ಸ್ತಬ್ಧಚಿತ್ರಕ್ಕೂ ವಿಶೇಷ ಬಹುಮಾನ ನೀಡಲಾಗಿದೆ.

Join Whatsapp