ನಿವೃತ್ತ ಐಜಿಪಿ ಎಂ.ಸಿ.ನಾರಾಯಣಗೌಡ ನಿಧನ

Prasthutha|

ಬೆಂಗಳೂರು: ನಿವೃತ್ತ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಎಂ.ಸಿ.ನಾರಾಯಣಗೌಡ ಅವರು ನಗರದಲ್ಲಿ ಭಾನುವಾರ ಮುಂಜಾನೆ ನಿಧನರಾದರು.

- Advertisement -

ಅನಾರೋಗ್ಯದಿಂದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಗೌಡ ಅವರು ಚಿಕಿತ್ಸೆ ಫಲಕಾರಿಯಾಗದೇ ಮುಂಜಾನೆ ಮೃತಪಟ್ಟಿದ್ದಾರೆ. ಮೃತ ನಾರಾಯಣಗೌಡ ಅವರಿಗೆ 70 ವರ್ಷ ವಯಸ್ಸಾಗಿತ್ತು ಕೇಂದರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ಸೇರಿ ಪತ್ನಿ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ.

ಉಪನ್ಯಾಸಕರಾಗಿದ್ದ ನಾರಾಯಣಗೌಡ ಅವರು ರಾಜ್ಯ ಮೀಸಲು ಪಡೆ (ಕೆಎಸ್ ಆರ್ ಪಿ)ಯ ಕಮಾಂಡೆಂಟ್ ಆಗಿ ನಂತರ ಐಪಿಎಸ್ ಅಧಿಕಾರಿಯಾಗಿ ಬಡ್ತಿ ಹೊಂದಿ ಬೆಂಗಳೂರು ಗ್ರಾಮಾಂತರ ಎಸ್ ಪಿ ಆದರು. ಅಲ್ಲಿಂದ ಉತ್ತರ ವಿಭಾಗ ಸಂಚಾರ ಡಿಸಿಪಿಯಾಗಿ ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತರಾಗಿ ಸಾರಿಗೆ ಇಲಾಖೆಯ ಆಯುಕ್ತ ರಾಗಿ ಅರಣ್ಯ ಆಡಳಿತ ವಿಭಾಗದ ಐಜಿಪಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.

- Advertisement -

ಮೃತರ ಅಂತ್ಯಕ್ರಿಯೆಯ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಾಸ್ತನಹಳ್ಳಿಯಲ್ಲಿ ಸಂಜೆ ನಡೆಯಲಿದೆ.

Join Whatsapp