ಉದ್ಘೋಷಿತ ಅಪರಾಧಿಗಳ ಪತ್ತೆಗೆ ಸುಳಿವು: ಬಹುಮಾನ ಮೊತ್ತ ಐದು ಲಕ್ಷ ರೂಪಾಯಿಗೆ ಹೆಚ್ಚಳ-ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿಗಳನ್ನು ಪತ್ತೆ ಮಾಡುವ ರಾಷ್ಟ್ರೀಯ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ, ಮಾದಕದ್ರವ್ಯ ಕಳ್ಳ ಸಾಗಣೆ, ಆಯುಧ ಕಳ್ಳಸಾಗಣೆ ಮತ್ತು ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಪೊಲೀಸರಿಗೆ ಸುಳಿವು ನೀಡುವ ವ್ಯಕ್ತಿಗಳಿಗೆ ಬಹುಮಾನ ಮೊತ್ತವನ್ನು ಇಪ್ಪತ್ತು ಸಾವಿರ ರೂಪಾಯಿಗಳಿಂದ ಐದು ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಅನುಮೋದನೆ ನೀಡಿದ್ದಾರೆ.

- Advertisement -

ಈ ಸಂಬಂಧ ರಾಜ್ಯ ಪೊಲೀಸ್ ಮುಖ್ಯಸ್ಥರು ಸಲ್ಲಿಸಿದ ಪ್ರಸ್ತಾವನೆಗೆ ಸಚಿವರು ಇಂದು ಅಂಕಿತ ಹಾಕಿದ್ದಾರೆ.

ಬಹುಮಾನದ ಮೊತ್ತವನ್ನು ಈ ಹಿಂದೆ 2017ರಲ್ಲಿ ಪರಿಷ್ಕರಿಸಿದ್ದು, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಐಜಿಪಿ ಅವರ ಆರ್ಥಿಕ ವಿತ್ತಾಧಿಕರದಲ್ಲಿ ಯಾವುದೇ ನಗದು ಪ್ರೋತ್ಸಾಹ ಧನವನ್ನು ನೀಡಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Join Whatsapp