Home ಟಾಪ್ ಸುದ್ದಿಗಳು ನೀರಿನಲ್ಲಿ ಕೊಚ್ಚಿ ಹೋದ ಅಕ್ಕಿ ಸಾಗಣೆ ವಾಹನ: ಓರ್ವ ನೀರುಪಾಲು

ನೀರಿನಲ್ಲಿ ಕೊಚ್ಚಿ ಹೋದ ಅಕ್ಕಿ ಸಾಗಣೆ ವಾಹನ: ಓರ್ವ ನೀರುಪಾಲು

ತುಮಕೂರು: ಆಂಧ್ರಪ್ರದೇಶದ ಪೆನಗೊಂಡದಿಂದ ತುಮಕೂರಿಗೆ ಅಕ್ಕಿ ಸಾಗಣೆ ಮಾಡುತ್ತಿದ್ದ ಮಹೇಂದ್ರ ವಾಹನ ಸಮೇತ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ವಡ್ಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಪ್ಪನಹಳ್ಳಿಗ್ರಾಮದ ದೊಡ್ಡ ಹಳ್ಳದಲ್ಲಿ ಇಂದು ಮುಂಜಾನೆ ನಡೆದಿದೆ.

ವಾಹನದಲ್ಲಿದ್ದ ಇಬ್ಬರ ಪೈಕಿ ಒಬ್ಬ ವ್ಯಕ್ತಿ ಅಪಾಯದಿಂದ ಪಾರಾಗಿದ್ದು ನೀರಿನ ರಭಸಕ್ಕೆ ವಾಹನ ಸಮೇತ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Join Whatsapp
Exit mobile version