ರಿಯಾಝ್ ಫರಂಗಿಪೇಟೆಗೆ ಇಂದು ಉಳ್ಳಾಲದಲ್ಲಿ ಅದ್ಧೂರಿ ಸ್ವಾಗತ

Prasthutha|

ಉಳ್ಳಾಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ಬಳಿಕ ಶುಕ್ರವಾರ ಸಾಯಂಕಾಲ ಉಳ್ಳಾಲಕ್ಕೆ ಆಗಮಿಸುತ್ತಿರುವ SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆಯವರಿಗೆ ಉಳ್ಳಾಲದಲ್ಲಿ ಭವ್ಯ ಸ್ವಾಗತ ಹಾಗೂ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

- Advertisement -


ಸಾಯಂಕಾಲ ನಾಲ್ಕು ಗಂಟೆಗೆ ಪುರಸಭಾ ಕಚೇರಿಯ ಮುಂಭಾಗದಲ್ಲಿ ಇರುವ ನಗರ ಸಮಿತಿ ಕಚೇರಿಯ ಆವರಣದಲ್ಲಿ ಕಾರ್ಯಕರ್ತರು ಹಾಗೂ ನಾಯಕರು ಅಭ್ಯರ್ಥಿಯನ್ನು ಬರಮಾಡಿಕೊಳ್ಳಲಿದ್ದಾರೆ . ನಂತರ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಉಳ್ಳಾಲ ದರ್ಗಾಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ,ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಉಳ್ಳಾಲ ವಿಧಾನಸಭಾ ಕ್ಷೇತ್ರಾಧ್ಯಕ್ಷ ಇರ್ಷಾದ್ ಅಜ್ಜಿನಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Join Whatsapp