‘ಸಂತ್ರಸ್ತ ರೈತರ ಕುಟುಂಬಗಳನ್ನು ನಿಮ್ಮ ಪಕ್ಷಕ್ಕೆ ಆಹ್ವಾನಿಸಿ’: BJPಗೆ ತಿರುಗೇಟು ನೀಡಿದ RLD ಮುಖ್ಯಸ್ಥ

Prasthutha|

ನವದೆಹಲಿ: ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ನಿಮ್ಮ ಪಕ್ಷಕ್ಕೆ ಆಹ್ವಾನಿಸಿ BJPಗೆ RLD ಮುಖ್ಯಸ್ಥ ಜಯಂತ್ ಚೌಧರಿ ತಿರುಗೇಟು ನೀಡಿದ್ದಾರೆ.

- Advertisement -

ಬಿಜೆಪಿ ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂದಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಚೌಧರಿ, “ಮೊದಲಿಗೆ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಿ ಮೃತಪಟ್ಟ 700 ರೈತರ ಕುಟುಂಬಗಳನ್ನು ನಿಮ್ಮ ಪಕ್ಷಕ್ಕೆ ಆಹ್ವಾನಿಸಿ, ನನ್ನನ್ನು ನಿಮ್ಮ ಪಕ್ಷಕ್ಕೆ ಆಹ್ವಾನಿಸಬೇಡಿ” ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಜಾಟ್ ಸಮುದಾಯದ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅಮಿತ್ ಶಾ ಇತ್ತೀಚೆಗೆ ರಾಷ್ಟ್ರೀಯ ಲೋಕದಳ (ಆರ್​ಎಲ್​ಡಿ) ಮುಖ್ಯಸ್ಥ ಜಯಂತ್ ಚೌಧರಿ ಅವರನ್ನು ಬಿಜೆಪಿಗೆ ಆಹ್ವಾನ ನೀಡಿದ್ದರು.

Join Whatsapp