ಮಂಗಳೂರಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ: ಬದಲಿ ಮಾರ್ಗ ಬಳಸಲು ಎನ್.ಶಶಿಕುಮಾರ್ ಆದೇಶ

Prasthutha|

ಮಂಗಳೂರು: ತಾಲೂಕಿನ ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ನಂಬ್ರ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ ಆದೇಶ ಹಾಗೂ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

- Advertisement -

ಬದಲಿ ರಸ್ತೆ ವ್ಯವಸ್ಥೆ:

ಕಟೀಲು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ಬಜಪೆ ಚರ್ಚ್ ಜಂಕ್ಷನ್’ನಲ್ಲಿ ಎಡಕ್ಕೆ ತಿರುಗಿ ಬಜಪೆ ಠಾಣೆಯ ಎದುರಿನ ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ಮುರ ಜಂಕ್ಷನ್, ಕಿನ್ನಿಪದವು ರಸ್ತೆ ಮೂಲಕ ಮಂಗಳೂರಿಗೆ ತಲುಪುವುದು.

- Advertisement -

ಮಂಗಳೂರಿನಿಂದ ಕಟೀಲು ಕಡೆಗೆ ಸಂಚರಿಸುವ ವಾಹನಗಳು ಮಂಗಳೂರಿನಿಂದ ಮರವೂರು ಸೇತುವೆ, ಕೆಂಜಾರು ಮಾರ್ಗವಾಗಿ ಕಿನ್ನಿಪದವು ಜಂಕ್ಷನ್ ನಲ್ಲಿ ಬಲಕ್ಕೆ ತಿರುಗಿ ಮುರ ಜಂಕ್ಷನ್, ಬಜಪೆ ಪೊಲೀಸ್ ಸ್ಟೇಷನ್ ಎದುರುಗಡೆಯಿಂದ ಬಜಪೆ ಚರ್ಚ್ ಜಂಕ್ಷನ್ ರಸ್ತೆಯ ಮೂಲಕ ಕಟೀಲು ಕಡೆಗೆ ಸಂಚರಿಸುವುದು. ಈ ಅಧಿಸೂಚನೆಯು 2023ರ ಅಕ್ಟೋಬರ್ 14ರ ವರೆಗೆ ಊರ್ಜಿತದಲ್ಲಿರುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.



Join Whatsapp