ಕೊಕ್ಕಡ : ವಿಎಚ್ ಪಿ ಮುಖಂಡನ ಮನೆಯಲ್ಲಿ ಮನೆಯವರನ್ನು ಕಟ್ಟಿಹಾಕಿ ದರೋಡೆ; ಒಂಬತ್ತು ದರೋಡೆಕೋರರು ಪರಾರಿ

Prasthutha|

ಬೆಳ್ತಂಗಡಿ : ಇಲ್ಲಿನ ಉಜಿರೆ ಬಾಲಕನ ಅಪಹರಣ ಪ್ರಕರಣದ ನೆನಪು ಮಾಸುವುದಕ್ಕೆ ಮುನ್ನವೇ, ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಬದಿಯಲ್ಲಿ ಮನೆಹೊಂದಿರುವ ವಿಎಚ್ ಪಿ ಮುಖಂಡ, ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ಸುಮಾರು ಒಂಬತ್ತು ಮಂದಿ ದರೋಡೆಕೋರರ ತಂಡವು ಸೋಮವಾರ ಬೆಳಗಿನ ಜಾವ ನುಗ್ಗಿ ಭಾರೀ ದರೋಡೆ ನಡೆಸಿದ ಆಘಾತಕಾರಿ ಘಟನೆ ವರದಿಯಾಗಿದೆ.

- Advertisement -

ಸೋಮವಾರ ನಸುಕಿನ ವೇಳೆ ಮನೆಗೆ ನುಗ್ಗಿದ ದರೋಡೆಕೋರರ ತಂಡ ಮನೆಯವರನ್ನು ಸ್ಥಳದಲ್ಲೇ ಕೂಡಿ ಹಾಕಿ, ಹಲ್ಲೆ ನಡೆಸಿ, ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಇರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ದೋಚಿದೆ ಎಂದು ತಿಳಿದು ಬಂದಿದೆ.

ಹಲ್ಲೆಗೊಳಗಾಗಿರುವ ತುಕ್ರಪ್ಪ ಶೆಟ್ಟಿ ಮತ್ತು ಇರಿತಕ್ಕೊಳಗಾಗಿರುವ ಅವರ ಪತ್ನಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮನೆಯಲ್ಲಿ ಪತಿ, ಪತ್ನಿ, ಇಬ್ಬರು ಸಣ್ಣ ಮಕ್ಕಳು ಮಾತ್ರ ಇದ್ದರು. ಮಾರಕಾಸ್ತ್ರ ತೋರಿಸಿ, ಬೆದರಿಸಿ ಈ ದರೋಡೆ ಮಾಡಲಾಗಿದೆ.

- Advertisement -

ವಿಶ್ವ ಹಿಂದೂ ಪರಿಷತ್ ಕೊಕ್ಕಡ ವಲಯ ಅಧ್ಯಕ್ಷರಾಗಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ದರೋಡೆಯಾಗಿರುವ ಸುದ್ದಿ ತಿಳಿದು ನೂರಾರು ಮಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ಭೇಟಿ ನೀಡಿ, ಘಟನೆಯ ವಿವರ ಪಡೆದುಕೊಂಡು, ಮುಂದಿನ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.  

Join Whatsapp