ಪೊಲೀಸರಿಂದ ಚಿನ್ನದ ವ್ಯಾಪಾರಿಯ ದರೋಡೆ: ಇನ್ಸ್’ಪೆಕ್ಟರ್ ಸೇರಿ ನಾಲ್ವರು ಪೊಲೀಸರು ಅಮಾನತು

Prasthutha|

ಚಿಕ್ಕಮಗಳೂರು: ರಕ್ಷಣೆ ನೀಡಬೇಕಾದ ಪೊಲೀಸರೇ ಚಿನ್ನದ ವ್ಯಾಪಾರಿಗೆ ಬೆದರಿಕೆ ಹಾಕಿ ಐದು ಲಕ್ಷ ರೂಪಾಯಿಯನ್ನು ದೋಚಿದ ವಿಲಕ್ಷಣ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿದ್ದು, ಇನ್ಸ್’ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಯ ಮೇಲೆ ಪ್ರಕರಣ ದಾಖಲಾಗಿದೆ.

- Advertisement -

ವ್ಯಾಪಾರಿಯಿಂದ ಹಣ ದೋಚಿದವರನ್ನು ಅಜ್ಜಂಪುರ ಪೊಲೀಸ್ ಠಾಣೆಯ ಇನ್ಸ್’ಪೆಕ್ಟರ್ ಲಿಂಗರಾಜ್, ಪೇದೆಗಳಾದ ಧನ್’ಪಾಲ್ ನಾಯ್ಕ್, ಓಂಕಾರ್’ಮೂರ್ತಿ,ಶರತ್ ರಾಜ್ ಎಂದು ಗುರುತಿಸಲಾಗಿದ್ದು, ಇವರ ಮೇಲೆ ದರೋಡೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಚಿನ್ನದ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಭಗವಾನ್ ಸಾಂಕ್ಲಾ ಎಂಬವರನ್ನು ಬೆದರಿಸಿದ ಈ ಪೊಲೀಸ್ ತಂಡ, ಬುಕ್ಕಾಂಬುದಿ ಟೋಲ್’ಗೇಟ್ ಸಮೀಪದಿಂದ ಅವರ ಬಳಿಯಿದ್ದ ಹಣವನ್ನು ದೋಚಿದೆ ಎಂದು ದೂರಲಾಗಿದೆ. ಘಟನೆಯ ಹಿನ್ನಲೆಯಲ್ಲಿ ಈ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯಲ್ಲೇ ಈ ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇನ್ಸ್’ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಯನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ಆದೇಶ ನೀಡಿದ್ದಾರೆ.

Join Whatsapp