ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯಿಂದ ಕೋಟ್ಯಾಂತರ ಮೌಲ್ಯದ ಸಂಪತ್ತಿನ ಲೂಟಿ : ಆರೋಪ

Prasthutha|

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಬಂಗಾರ, ಆಸ್ತಿ ಮತ್ತು ನಿಧಿ ಲೂಟಿಯಾಗಿರುವುದು ಲೆಕ್ಕ ಪರಿಶೋಧಕರ ವರದಿಯಿಂದ ಬಹಿರಂಗವಾಗಿದೆ. ಅಧಿಕಾರಿಗಳು ಸುಮಾರು 15 ವರ್ಷಗಳಿಂದ ಲೂಟಿ ಮಾಡುತ್ತಿದ್ದಾರೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ  ಮೋಹನ ಗೌಡ ಆರೋಪಿಸಿದ್ದಾರೆ.

- Advertisement -

ಭಕ್ತರು ನೀಡುವ ದಾನವನ್ನು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಲೂಟಿ ಮಾಡುತ್ತಿದೆ. ದೇವಸ್ಥಾನದ ಆಡಳಿತದಲ್ಲಿ ಬೃಹತ್ ಪ್ರಮಾಣದಲ್ಲಿ ಹಗರಣ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಆಂದೋಲನ ನಡೆಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಅವರು ಎಚ್ಚರಿಕೆ ನೀಡಿದ್ದಾರೆ.

Join Whatsapp