Home ಕರಾವಳಿ ಮಂಗಳೂರು: ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು

ಮಂಗಳೂರು: ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯ ಸೇವಾಂಜಲಿ ಟ್ರಸ್ಟ್ ಸಹಯೋಗದಲ್ಲಿ ನಾಡ ಗೀತೆ ಸೇರಿದಂತೆ ನಾಡಿನ ಮಹನೀಯರನ್ನು ಅವಮಾನಿಸಿದ್ದ ರೋಹಿತ್ ಚಕ್ರತೀರ್ಥನಿಗೆ ಜೂನ್ 25 ರಂದು ನಡೆಯಬೇಕಿದ್ದ ನಾಗರಿಕ ಸನ್ಮಾನವನ್ನು ರದ್ದುಗೊಳಿಸಲಾಗಿದೆ.

ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಯಡಪಡಿತ್ತಾಯ ವಹಿಸಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಉಂಟಾಗಿತ್ತು.

ರೋಹಿತ್ ಚಕ್ರತೀರ್ಥ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಮುತ್ತಿಗೆ ಹಾಕಿ, ಗಲಾಟೆ, ದೊಂಬಿ ನಡೆಸಿ ನಗರದ ಶಾಂತಿ, ಸುವ್ಯವಸ್ಥೆ ಹಾಳು ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿ ಬಂದ ಹಿನ್ನಲೆಯಲ್ಲಿ ಜೂನ್ 25 ರ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Join Whatsapp
Exit mobile version