Home ಜಾಲತಾಣದಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ಹತ್ಯೆ

ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ.

ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು ಹತ್ಯೆಗೀಡಾದ ರೌಡಿಶೀಟರ್​. ಕೊಲೆ ಆಗಿರುವ ಚಂದು ನಗರಪಾಲಿಕೆ ಮಾಜಿ ಸದಸ್ಯ ಅವ್ವಾ ಮಾದೇಶ್ ಆಪ್ತ ಎನ್ನಲಾಗುತ್ತಿದೆ.

ಬೈಕ್​ಗಳಲ್ಲಿ ಬಂದ 6 ದುಷ್ಕರ್ಮಿಗಳು ಮಚ್ಚು, ಲಾಂಗ್​ನಿಂದ ಕೊಚ್ಚಿ ಬರ್ಬರ ಹತ್ಯೆಗೈದು ಪರಾರಿ ಆಗಿದ್ದಾರೆ. ಹುಣಸೂರು ಜೋಡಿ ಕೊಲೆ ಕೇಸ್​ನಲ್ಲಿ ಚಂದು ಆರೋಪಿಯಾಗಿದ್ದು, ಕೆಲ ದಿನಗಳಿಂದಷ್ಟೇ ಜೈಲಿನಿಂದ ಹೊರ ಬಂದಿದ್ದ.

ಪಡುವಾರಳ್ಳಿಯ ದೇವು ಕೊಲೆಗೆ ಪ್ರತಿಕಾರ ತೀರಿಸಿಕೊಂಡ ಶಂಕೆ ವ್ಯಕ್ತವಾಗಿದ್ದು, ಒಂಟಿಕೊಪ್ಪಲಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಜಯಲಕ್ಷ್ಮಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Join Whatsapp
Exit mobile version