ಬ್ಯಾಂಕಿನೊಳಗೆ ರೌಡಿ ಬಬ್ಲಿ ಕೊಲೆ: ಪತ್ನಿ ಕಣ್ಣೆದುರೇ ಕೃತ್ಯ

Prasthutha|

ಬೆಂಗಳೂರು: ಪತ್ನಿಯ ಜೊತೆ ಬ್ಯಾಂಕ್ ಗೆ ಬಂದಿದ್ದ ರೌಡಿಯೊಬ್ಬನನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಿರುವ ದುರ್ಘಟನೆ ಕೋರಮಂಗಲದಲ್ಲಿ ನಡೆದಿದೆ.

- Advertisement -

ಆಡುಗೋಡಿ ರೌಡಿಶೀಟರ್ ಜೋಸೆಫ್ ಅಲಿಯಾಸ್ ಬಬ್ಲಿ ಕೊಲೆಗೀಡಾದ ವ್ಯಕ್ತಿ.
ಕೋರಮಂಗಲದಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಗೆ ಮಧ್ಯಾಹ್ನ 1.30ರ ವೇಳೆ ನುಗ್ಗಿ ಪತ್ನಿಯ ಜೊತೆ ಬಂದಿದ್ದ ಜೋಸೆಫ್ ಅಲಿಯಾಸ್ ಬಬ್ಲಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಹತ್ಯೆಗೀಡಾದ ಆಡುಗೋಡಿ ರೌಡಿಶೀಟರ್ ಜೋಸೆಫ್ ಅಲಿಯಾಸ್ ಬಬ್ಲಿ ತನ್ನ ಪತ್ನಿಯ ಜೊತೆ ಕೋರಮಂಗಲದ 8ನೇ ಬ್ಲಾಕ್ ನಲ್ಲಿನ ಯೂನಿಯನ್ ಬ್ಯಾಂಕ್ಗೆ ಬಂದಿದ್ದ. ದುಷ್ಕರ್ಮಿಗಳು ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.
ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬೈಕ್ ಗಳಲ್ಲಿ ಬಂದಿದ್ದ 8 ಮಂದಿ ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದಾರೆ.

- Advertisement -

ಕೊಲೆಯಾದ ವ್ಯಕ್ತಿ ಬಬ್ಲಿ ಕೊರಮಂಗಲದ ರಾಜೇಂದ್ರ ಮತ್ತು ವಿವೇಕ ನಗರದ ಜಾರ್ಜ್ ಎಂಬಾತನ ಜೊತೆ ಹಳೆ ದ್ವೇಷ ಹೊಂದಿದ್ದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್, ಆಗ್ನೇಯ ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಮಡಿವಾಳ ಎಸಿಪಿ ಸುದೀರ್ ಹೆಗ್ಗಡೆ ಭೇಟಿ ನೀಡಿದ್ದಾರೆ. ಶ್ವಾನದಳ ಎಫ್ ಎಸ್ ಎಲ್ ತಂಡದವರೂ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Join Whatsapp