ಚಿತ್ತಾಪುರ ಕ್ಷೇತ್ರದಿಂದ ರೌಡಿ ಶೀಟರ್ ಮಣಿಕಂಠನನ್ನು ಕಣಕ್ಕಿಳಿಸಿದ ಬಿಜೆಪಿ!

Prasthutha|

ಕಲಬುರಗಿ: ವಿಧಾನಸಭಾ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ್ದು, ಸ್ವತ: ಪಕ್ಷದ ಮುಖಂಡರೇ ಅಚ್ಚರಿಪಡುವಂತೆ ಟಿಕೆಟ್ ಘೋಷಣೆ ಮಾಡಲಾಗಿದೆ.

- Advertisement -

ಚಿತ್ತಾಪುರ ಕ್ಷೇತ್ರದಿಂದ ಬಿಜೆಪಿಯು ರೌಡಿ ಶೀಟರ್ ಪಟ್ಟಿಯಲ್ಲಿರುವ ಮಣಿಕಂಠ ರಾಠೋಡ ಅವರಿಗೆ ಟಿಕೆಟ್ ನೀಡಿದೆ.
ಈ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಸ್ಪರ್ಧಿಸುತ್ತಿದ್ದಾರೆ.

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ವಿರುದ್ಧ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ.

- Advertisement -

ಇತ್ತೀಚೆಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಿಂದ ಶಿಕ್ಷೆಗೂ ಗುರಿಯಾಗಿರುವ ಅವರನ್ನು ಕಲಬುರಗಿ ಪೊಲೀಸ್ ಕಮಿಷನರ್ ಆಗಿದ್ದ ಡಾ.ವೈ.ಎಸ್. ರವಿಕುಮಾರ್ ಅವರು ಗಡಿಪಾರು ಮಾಡಿದ್ದರು.

ಚಿತ್ತಾಪುರ ಕ್ಷೇತ್ರದಲ್ಲಿ ವಿಧಾನಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ, ಮುಖಂಡರಾದ ಅರವಿಂದ ಚವ್ಹಾಣ, ಮಾಜಿ ಶಾಸಕ ದಿ. ವಾಲ್ಮೀಕಿ ನಾಯಕ್ ಪುತ್ರ ವಿಠಲ ನಾಯಕ್ ಪ್ರಬಲ ಆಕಾಂಕ್ಷಿಗಳಾಗಿದ್ದರು.

Join Whatsapp