Home ಟಾಪ್ ಸುದ್ದಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಸಾವು

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಸಾವು

ರಾಮನಗರ : ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ‌ ರೌಡಿಶೀಟರ್ ಸಾವನ್ನಪ್ಪಿರುವ ಘಟನೆ ರಾಮನಗರದ ಬಸವನಪುರ ಗ್ರಾಮದ ಬಳಿ ಘಟನೆ ನಡೆದಿದೆ.

ಬೆಂಗಳೂರಿನ ಸುಂಕದಕಟ್ಟೆ ನಿವಾಸಿ ದಿಲೀಪ್ (28) ಸಾವಿಗೀಡಾದ ವ್ಯಕ್ತಿ. ಯುವಕರು ಬೆಂಗಳೂರಿನಿಂದ ಮೈಸೂರಿಗೆ ಕಾರಿನಲ್ಲಿ ಹೊರಟಿದ್ದರು. ಕುಡಿದ ಅಮಲಿನಲ್ಲಿ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಪೊಲೀಸರು ವಾಹನ ತಪಾಸಣೆ ನಡೆಸಿದಾಗ ಓರ್ವ ಯುವಕ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದಾನೆ. ರಸ್ತೆ ಪಕ್ಕದಲ್ಲೇ ಇದ್ದ ಹಳಿ ದಾಟುವಾಗ ರೈಲಿಗೆ ಸಿಲುಕಿ ಆರೋಪಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

Join Whatsapp
Exit mobile version