Home ಟಾಪ್ ಸುದ್ದಿಗಳು ರೌಡಿಶೀಟರ್ ಜೆಸಿಬಿ ನಾರಾಯಣ ಮೇಲೆ ದುಷ್ಕರ್ಮಿಗಳಿಂದ ದಾಳಿ: ಕೂದಲೆಳೆ ಅಂತರದಲ್ಲಿ ಪಾರು

ರೌಡಿಶೀಟರ್ ಜೆಸಿಬಿ ನಾರಾಯಣ ಮೇಲೆ ದುಷ್ಕರ್ಮಿಗಳಿಂದ ದಾಳಿ: ಕೂದಲೆಳೆ ಅಂತರದಲ್ಲಿ ಪಾರು

ಬೆಂಗಳೂರು: ಕಾರಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಯತ್ನಿಸಿದ್ದು   ರೌಡಿಶೀಟರ್ ಜೆಸಿಬಿ ನಾರಾಯಣ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ನಡೆದಿದೆ.

ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ದಾಳಿ ನಡೆಸಲು ಹೊಂಚು ಹಾಕಿ ಕಾಯುತ್ತಿದ್ದರು. ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣನ ಕಾರು ಬರುತ್ತಿದ್ದಂತೆ ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಾರೆ.

 ಜೆಸಿಬಿ ನಾರಾಯಣ ಅಪಾಯದ ಮುನ್ಸೂಚನೆ ಅರಿತು ಕೂಡಲೇ ಸಿನಿಮೀಯ ರೀತಿಯಲ್ಲಿ ಕಾರು ರಿವರ್ಸ್ ತೆಗೆದುಕೊಂಡು ಪರಾರಿಯಾಗಿದ್ದಾನೆ. ಕೂದಲೆಳೆ ಅಂತರದಲ್ಲಿ ಜೀವ ಉಳಿದಿದೆ.

ನಾಲ್ಕೈದು ಜನ ದುಷ್ಕರ್ಮಿಗಳ ಚಲನವಲನ, ದುಷ್ಕರ್ಮಿಗಳು ಮಾರಕಾಸ್ತ್ರ ಹಿಡಿದು ದಾಳಿಗೆ ಯತ್ನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಹಾಕಿದ್ದ ಸಂಚು ತಪ್ಪಿದ ಕೂಡಲೇ ದುಷ್ಕರ್ಮಿಗಳ ಗ್ಯಾಂಗ್ ಸ್ಥಳದಿಂದ ಪರಾರಿಯಾಗಿದೆ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿ ಕ್ಯಾಮರಾ ದೃಶ್ಯಾವಳಿ ಹಾಗೂ ದೂರನ್ನು ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

Join Whatsapp
Exit mobile version