ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ಆರ್‌ಆರ್‌ಡಿ ವಕ್ತಾರ ರಾಜೀನಾಮೆ

Prasthutha|

ನವದೆಹಲಿ: ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಪ್ರಕರಣ ಎದುರಿಸುತ್ತಿದ್ದರೂ, ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಬಿಜೆಪಿ ಮಿತ್ರಪಕ್ಷ ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ವಕ್ತಾರ ರೋಹಿತ್ ಜಾಖರ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಮಹಿಳಾ ಕುಸ್ತಿಪಟುಗಳಿಗೆ, ದೇಶಕ್ಕೆ ಮಾಡಿದ ಅವಮಾನವಾಗಿದೆ. ನನಗೆ ದೇಶದ ಗೌರವ ಮುಖ್ಯ ಎಂದು ಜಾಖರ್ ಹೇಳಿದ್ದಾರೆ

ಬೇರೆ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರ್ಪಡೆಯಾಗುವುದಿಲ್ಲ ಎಂದು ಅವರು ತಿಳಿಸಿದ್ದು, ಸಾಮಾಜಿಕ ಸಮಸ್ಯೆಗಳ ವಿರುದ್ಧ ನನ್ನ ಹೋರಾಟವನ್ನು ನಾನು ಮುಂದುವರಿಸುತ್ತೇನೆ ಎಂದೂ ತಿಳಿಸಿದ್ದಾರೆ.

- Advertisement -

ಒಂದು ದಶಕಗಳ ಕಾಲದಿಂದ ಆರ್‌ಎಲ್‌ಡಿಯಲ್ಲಿರುವ ಜಾಕರ್‌ ಆರ್‌ಎಲ್‌ಡಿಯ ಪ್ರಮುಖ ನಾಯಕರುಗಳಲ್ಲಿ ಒಬ್ಬರು. ರಾಷ್ಟ್ರೀಯ ಜಟ್ ಫೆಡರೇಶನ್‌ನ ರಾಜ್ಯ ಅಧ್ಯಕ್ಷರೂ ಆದ ಅವರು ರೈತರ ಆಂದೋಲನದ ಜೊತೆಯೂ ಕೈಜೋಡಿಸಿದ್ದಾರೆ.

Join Whatsapp