ಸಿಎಂ ಬೊಮ್ಮಾಯಿ ನಿವಾಸದ ಬಳಿ 10 ಲಕ್ಷ ಜಪ್ತಿ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಕೊಂಚ ದೂರದಲ್ಲೇ ಇರುವ ಆರ್​.ಟಿ ನಗರದ ವ್ಯಾಪ್ತಿಯ ಚೆಕ್ ​​ಪೋಸ್ಟ್​ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ಹಣವನ್ನ ಜಪ್ತಿ ಮಾಡಲಾಗಿದೆ.

- Advertisement -

ಕಾರು ತಪಾಸಣೆ ವೇಳೆ ಅಕ್ರಮ ಹಣ ಪತ್ತೆಯಾಗಿದ್ದು, ಮುಹಮ್ಮದ್​ ಷರೀಫ್​, ಮಹಮ್ಮದ್​ ಯುನೂಸ್​ ಎಂಬುವವರನ್ನು ವಶಕ್ಕೆ ಪಡೆದು, ಆರ್​.ಟಿ.ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ವೇಳೆ ತಾವು ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ಶೋ ನಡೆಸುತ್ತಿರುವುದಾಗಿ ಕಾರಿನ ಮಾಲೀಕ ಹೇಳಿದ್ದು ಹೆಚ್ಚಿನ ವಿಚಾರಣೆಯನ್ನು ಕೈಗೊಳ್ಳಲಾಗಿದೆ.

- Advertisement -

93 ಲಕ್ಷ ಹಣ ಜಪ್ತಿ:

ಕುಮಟಾ ತಾಲೂಕಿನ ಚಂದಾವರ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.

ಆಟೋದಲ್ಲಿ ಸಾಗಾಟ ಮಾಡುತಿದ್ದ ವೇಳೆ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದು, ಈ ವೇಳೆ ಅಕ್ರಮ ಹಣ ಇರುವುದು ಪತ್ತೆಯಾಗಿದೆ. ಈ ಹಣವನ್ನ ಶಿವಮೊಗ್ಗದಿಂದ ಕುಮಟಾಕ್ಕೆ ತರಲಾಗುತ್ತಿದ್ದು, ಕೆಎ14 ಸಿ 4874 ನೊಂದಣಿ ಹೊಂದಿರುವ ಆಟೋವನ್ನು ಹಾಗೂ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕುಮಟಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp