25 ಲಕ್ಷ ರೂ. ಸಂಬಳದ ಕೆಲಸ ಬಿಟ್ಟು UPSC ಗೆ ತಯಾರಿ ನಡೆಸುತ್ತಿದ್ದ ಯುವಕ ಆತ್ಮಹತ್ಯೆ

Prasthutha|

ಕಾನ್ಪುರ: 25 ಲಕ್ಷ ರೂಪಾಯಿ ಸಂಬಳ ಸಿಗುತ್ತಿದ್ದ ಕೆಲಸ ಬಿಟ್ಟು UPSC ಗೆ ತಯಾರಿ ನಡೆಸುತ್ತಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ರಾವತ್‌ಪುರದಲ್ಲಿ ನಡೆದಿದೆ.

- Advertisement -

ಮೃತರನ್ನು ಕುಲದೀಪ್ ಸಿಂಗ್ ಸೋಲಂಕಿಯ (29) ಎಂದು ಗುರುತಿಸಲಾಗಿದೆ.

ಕಾಸ್ಗಂಜ್ ಭುಜಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಧಪುರದಲ್ಲಿ ವಾಸಿಸುತ್ತಿದ್ದರು. ಕಳೆದೆರಡು ವರ್ಷಗಳಿಂದ ಯುಪಿಎಸ್‌ಸಿಗೆ ತಯಾರಿ ನಡೆಸಲು ತುಳಸಿ ವಿಹಾರದಲ್ಲಿರುವ ಪ್ರಿನ್ಸ್ ಬಾಯ್ಸ್ ಹಾಸ್ಟೆಲ್‌ನಲ್ಲಿದ್ದರು. ಪೂರ್ವ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದರೂ ಕೂಡ ಅಂತಿಮ ಪಟ್ಟಿಯಲ್ಲಿ ಹೆಸರು ಕಾಣಿಸಿಕೊಂಡಿಲ್ಲ. ಇದರಿಂದಾಗಿ ಮನ ನೊಂದು ವಿಷ ಸೇವಿಸಿದ್ದಾರೆ. ಈ ವಿಷಯ ತಿಳಿದ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟೊತ್ತಿಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

- Advertisement -

2017ರಲ್ಲಿ ಬಿಟೆಕ್‌ ಮುಗಿಸಿದ ತಕ್ಷಣ ಕುಲದೀಪ್ ಗೆ 25 ಲಕ್ಷ ರೂಪಾಯಿ ಸಂಬಳ ಸಿಗುವ ಉದ್ಯೋಗ ಸಿಕ್ಕಿತ್ತು. ಆದರೆ UPSCಗೆ ತಯಾರಿ ನಡೆಸಲು ಆ ಕೆಲಸ ಬಿಟ್ಟಿದ್ದರು ಎನ್ನಲಾಗಿದೆ.



Join Whatsapp