5 ರೂ. ಹಾಲಿನ ದರ ಏರಿಕೆಗೆ ಸಿಎಂಗೆ ಮನವಿ: ಸಚಿವ ಕೆ.ಎನ್. ರಾಜಣ್ಣ

Prasthutha|

ತುಮಕೂರು: ರಾಜ್ಯದಲ್ಲಿ ಮತ್ತೆ ಹಾಲಿನ ದರ ಏರಿಕೆ ಖಚಿತವಾಗಿದ್ದು, ಪ್ರತೀ ಲೀಟರ್ ಹಾಲಿನ ದರದಲ್ಲಿ 5 ರೂ ಏರಿಕೆ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

- Advertisement -


ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ರಾಜಣ್ಣ, ‘ಇಡೀ ದೇಶದಲ್ಲೇ ಹಾಲಿನ ದರ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ಹಾಗಾಗಿ ಈಗಿರುವ ಹಾಲಿನ ದರವನ್ನು ರೈತರ ಹಿತದೃಷ್ಟಿಯಿಂದ 5 ರೂಪಾಯಿ ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.


ರಾಜ್ಯದಲ್ಲಿ 5 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿದರೆ ಅದರ ಲಾಭ ನೇರವಾಗಿ ರೈತರಿಗೆ ಸಿಗುತ್ತದೆ. ಯಾವುದೇ ಕಾರಣಕ್ಕೂ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೆ 1 ರೂಪಾಯಿ ಕೂಡಾ ಲಾಭ ಆಗುವುದಿಲ್ಲ. ಏಕೆಂದರೆ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡಿದರೆ ಅಷ್ಟು ಮೊತ್ತವನ್ನು ರೈತರಿಂದ ಸಂಗ್ರಹಿಸುವ ಹಾಲಿಗೆ ನೀಡಲಾಗುವುದು ಎಂದರು.



Join Whatsapp