ತೀರ್ಥಹಳ್ಳಿ ತಾಲೂಕಿನ 2 ಹೊಸ ಸೇತುವೆಗಳ ನಿರ್ಮಾಣಕ್ಕೆ 50 ಕೋಟಿ ರೂ.ಮಂಜೂರು: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ತೀರ್ಥಹಳ್ಳಿ ತಾಲೂಕಿನಲ್ಲಿ ಸುಮಾರು 50 ಕೋಟಿ ರೂಪಾಯಿಗಳ ವೆಚ್ಚದ ಎರಡು ಸೇತುವೆಗಳ ಕಾಮಗಾರಿಗೆ ರಾಜ್ಯ ಆರ್ಥಿಕ ಇಲಾಖೆ ಹಸಿರು ನಿಶಾನೆ ನೀಡಿದೆ.

- Advertisement -


ರಾಜ್ಯ ಆರ್ಥಿಕ ಇಲಾಖೆಯು ತೀರ್ಥಹಳ್ಳಿ ತಾಲೂಕಿನ ತೂದೂರು – ಮುಂಡುವಳ್ಳಿ ಗ್ರಾಮಗಳ ನಡುವೆ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ 25.65 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.


ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಕಾರಣಗಿರಿ – ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರಿನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ 24.36 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಒಪ್ಪಿಗೆ ದೊರೆತಿದ್ದು, ಶೀಘ್ರವಾಗಿ, ಯೋಜನೆ ಅನುಷ್ಠಾನಕ್ಕೆ ಟೆಂಡರ್ ಕರೆಯಲಾಗುವುದು. ಕ್ಷೇತ್ರದ ಶಾಸಕರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಎರಡು ಯೋಜನೆಗಳ ಮಂಜೂರಾತಿಗೆ ಬೇಡಿಕೆ ಮಂಡಿಸಿ ಪ್ರಸ್ತಾವನೆ ಸಲ್ಲಿಸಿದ್ದರು.
ತೂದೂರು- ಮುಂಡುವಳ್ಳಿ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಯೋಜನೆ ಕಾರ್ಯಗತ ಗೊಳಿಸಬೇಕೆಂದು ದಶಕಗಳಿಂದ ಬೇಡಿಕೆ ಇದ್ದರೂ, ಇದುವರೆಗೆ ಮಾನ್ಯತೆ ದೊರೆತಿರಲಿಲ್ಲ. ಈ ಎರಡೂ ಕಾಮಗಾರಿಗಳನ್ನು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ ಕಾರ್ಯಗತಗೊಳಿಸಲಾಗುವುದು ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Join Whatsapp