ಆಂಧ್ರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬಕ್ಕೆ ₹5000: ಕಾಂಗ್ರೆಸ್ ‘ಗ್ಯಾರಂಟಿ’

Prasthutha|

ಅನಂತಪುರಂ: ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಬಡ ಕುಟುಂಬಕ್ಕೆ ತಿಂಗಳಿಗೆ ₹5000 ಮೊತ್ತವನ್ನು ನೀಡುವ ಗ್ಯಾರಂಟಿಯನ್ನು ಕಾಂಗ್ರೆಸ್ ಘೋಷಿಸಿದೆ.

- Advertisement -

ಅನಂತಪುರಂನಲ್ಲಿ ನಡೆದ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಈ ಹೊಸ ಘೋಷಣೆಯನ್ನು ಕಾಂಗ್ರೆಸ್ ಮಾಡಿದೆ. ಈ ಯೋಜನೆಗೆ ಇಂದಿರಮ್ಮ ಸಾರ್ವತ್ರಿಕ ಮೂಲ ಆದಾಯ ಎಂದು ಹೆಸರಿಟ್ಟಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಘೋಷಣೆಯನ್ನು ಕನ್ನಡದಲ್ಲೇ ಘೋಷಿಸಿದ್ದಾರೆ.

- Advertisement -

ನಾವು ಅಧಿಕಾರಕ್ಕೆ ಬಂದ ತಕ್ಷಣ ಸಾರ್ವತ್ರಿಕ ಮೂಲ ಆದಾಯ ಯೋಜನೆಯನ್ನು ಜಾರಿಗೆ ತರುವ ಮೂಲಕ ಪ್ರತೀ ಬಡ ಕುಟುಂಬಕ್ಕೆ ತಿಂಗಳಿಗೆ ಐದು ಸಾವಿರವನ್ನು ಕೊಡುವಂತಹ ಕೆಲಸವನ್ನು ಮಾಡಲಿದ್ದೇವೆ. ಇದು ನಮ್ಮ ಗ್ಯಾರಂಟಿ ಎಂದು ಖರ್ಗೆ ಘೋಷಿಸಿದರು.

Join Whatsapp