Home Uncategorized ಆಂಧ್ರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬಕ್ಕೆ ₹5000: ಕಾಂಗ್ರೆಸ್ ‘ಗ್ಯಾರಂಟಿ’

ಆಂಧ್ರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬಕ್ಕೆ ₹5000: ಕಾಂಗ್ರೆಸ್ ‘ಗ್ಯಾರಂಟಿ’

ಅನಂತಪುರಂ: ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಬಡ ಕುಟುಂಬಕ್ಕೆ ತಿಂಗಳಿಗೆ ₹5000 ಮೊತ್ತವನ್ನು ನೀಡುವ ಗ್ಯಾರಂಟಿಯನ್ನು ಕಾಂಗ್ರೆಸ್ ಘೋಷಿಸಿದೆ.

ಅನಂತಪುರಂನಲ್ಲಿ ನಡೆದ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಈ ಹೊಸ ಘೋಷಣೆಯನ್ನು ಕಾಂಗ್ರೆಸ್ ಮಾಡಿದೆ. ಈ ಯೋಜನೆಗೆ ಇಂದಿರಮ್ಮ ಸಾರ್ವತ್ರಿಕ ಮೂಲ ಆದಾಯ ಎಂದು ಹೆಸರಿಟ್ಟಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಘೋಷಣೆಯನ್ನು ಕನ್ನಡದಲ್ಲೇ ಘೋಷಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದ ತಕ್ಷಣ ಸಾರ್ವತ್ರಿಕ ಮೂಲ ಆದಾಯ ಯೋಜನೆಯನ್ನು ಜಾರಿಗೆ ತರುವ ಮೂಲಕ ಪ್ರತೀ ಬಡ ಕುಟುಂಬಕ್ಕೆ ತಿಂಗಳಿಗೆ ಐದು ಸಾವಿರವನ್ನು ಕೊಡುವಂತಹ ಕೆಲಸವನ್ನು ಮಾಡಲಿದ್ದೇವೆ. ಇದು ನಮ್ಮ ಗ್ಯಾರಂಟಿ ಎಂದು ಖರ್ಗೆ ಘೋಷಿಸಿದರು.

Join Whatsapp
Exit mobile version