ಪಾಲಕ್ಕಾಡ್: RSS ಮುಖಂಡನ ಹತ್ಯೆ

Prasthutha|

ಪಾಲಕ್ಕಾಡ್: ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಆರ್ ಎಸ್ ಎಸ್ ಶಾರೀರಿಕ್ ಪ್ರಮುಖ್ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧಗಳಿಂದ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಪಾಲಕ್ಕಾಡ್ ಪಟ್ಟಣದ ಮೇಲಮುರಿ ಎಂಬಲ್ಲಿ ನಡೆದಿದೆ.

- Advertisement -


ಎಸ್ ಕೆ. ಶ್ರೀನಿವಾಸನ್ ಹತ್ಯೆಗೀಡಾದ ಆರ್ ಎಸ್ ಎಸ್ ದೈಹಿಕ ಶಿಕ್ಷಣ ತರಬೇತುದಾರ ಎಂದು ಗುರುತಿಸಲಾಗಿದೆ. ಮೇಲಾಮುರಿ ಎಂಬಲ್ಲಿ ಅವರು ನಡೆಸುತ್ತಿದ್ದ ಎಸ್.ಕೆ.ಆಟೋಮೊಬೈಲ್ ಎಂಬ ಅಂಗಡಿಗೆ ನುಗ್ಗಿದ ತಂಡ ಮಾರಕಾಯುಧದಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಎರಡು ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳ ತಂಡ ಶ್ರೀನಿವಾಸ ಅವರ ಅಂಗಡಿಗೆ ನುಗ್ಗಿ ಈ ಕೃತ್ಯವೆಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆಯಷ್ಟೇ ಈ ಪ್ರದೇಶದಲ್ಲಿ ಎಸ್ ಡಿಪಿಐ ಕಾರ್ಯಕರ್ತ ಝುಬೈರ್ ಅವರನ್ನು ಸಂಘಪರಿವಾರದ ಕಾರ್ಯಕರ್ತರು ಹತ್ಯೆ ನಡೆಸಿದ್ದರು.

- Advertisement -

ಹಣಕಾಸು ವಿಚಾರ ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ.



Join Whatsapp