RSS ಮುಖಂಡ ಸಂಚರಿಸುತ್ತಿದ್ದ ಕಾರು ಅಪಘಾತ

Prasthutha|

ಯಲ್ಲಾಪುರ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಊರಾದ ಅಂಕೋಲಾಕ್ಕೆ ಬರುತ್ತಿದ್ದ ಆರ್.ಎಸ್.ಎಸ್. ರಾಷ್ಟ್ರೀಐ ಮುಖಂಡ ಮಂಗೇಶ ಭೆಂಡೆ ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ನಾಗಪುರದ ಕೇಂದ್ರ ಕಚೇರಿಯಲ್ಲಿರುವ ಮಂಗೇಶ್ ಭೆಂಡೆ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥಾ ಪ್ರಮುಖರಾಗಿದ್ದಾರೆ. ಅವರು ಸಂಚರಿಸುತ್ತಿದ್ದ ಕಾರು ಯಲ್ಲಾಪುರ ತಾಲ್ಲೂಕಿನ ಬಿಸಗೋಡ ಕ್ರಾಸ್ ಬಳಿ ಮಂಗಳವಾರ ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ಡಿಕ್ಕಿಯಾಗಿದೆ.

ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ತಕ್ಷಣ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

Join Whatsapp