RSS ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ, ಕಾರ್ಯಕರ್ತರ ಮೇಲೆ ಹಲ್ಲೆ

Prasthutha|

ಶಹಜಹಾನ್ಪುರ: ಆರ್ ಎಸ್ ಎಸ್ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರ ಜಿಲ್ಲೆಯ ಟೌನ್ ಹಾಲ್ ಪ್ರದೇಶದಲ್ಲಿ ನಡೆದಿದೆ.

- Advertisement -


ಅಲ್ಲದೆ, ಆರ್ ಎಸ್ ಎಸ್ ಕಾರ್ಯಕರ್ತರಿಗೆ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.


ಒಂದಿಷ್ಟು ಜನ ಗುಂಪಾಗಿ ಬಂದು ಆರ್ ಎಸ್ ಎಸ್ ಕಚೇರಿ ಮೇಲೆ ದಾಳಿ ಮಾಡಿ ಅಲ್ಲಿರುವ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.

- Advertisement -


ಇನ್ನು ಈ ಘಟನೆಯ ಬಗ್ಗೆ ಪರಿಶೀಲನೆ ನಡೆಸಿದ ಉನ್ನತ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು, ಇಬ್ಬರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Join Whatsapp