ಸದನದಲ್ಲಿ ಚರ್ಚೆ ಮಾಡಲು ಆಡಳಿತ ಮತ್ತು ವಿಪಕ್ಷ ಅವಕಾಶ ನೀಡಿಲ್ಲ: ದೇವೇಗೌಡ ಬೇಸರ

Prasthutha|

ನವ ದೆಹಲಿ: ಚರ್ಚೆ ಮಾಡಲು ನಮ್ಮ ವಿರೋಧ ಪಕ್ಷಗಳು ಹಾಗು ಆಡಳಿತ ಪಕ್ಷಗಳು ಅವಕಾಶ ಮಾಡಿಕೊಟ್ಟಿಲ್ಲ. ಹಾಗಾಗಿ ಕಲಾಪದಲ್ಲಿ ಯಾವುದೇ ವಿಷಯಗಳು ಚರ್ಚೆಯಾಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.

- Advertisement -


ದೆಹಲಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಅವರು ತಮ್ಮ ಸಂಪುಟದಲ್ಲಿ ಮೊದಲ ಬಾರಿಗೆ 12 ಮಹಿಳೆಯರಿಗೆ, 8 ಎಸ್ಸಿ, 12 ಎಸ್ಟಿ ಸಮುದಾಯದ ನಾಯಕರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಇದು ಸಾಮಾಜಿಕ ನ್ಯಾಯವೋ, ಚುನಾವಣೆ ತಂತ್ರವೋ ಗೊತ್ತಿಲ್ಲ. ಆದರೆ ಅದು ಏನೇ ಇದ್ದರೂ ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದರು.
ನಾನು ಪ್ರಧಾನಿಯಾಗಿದ್ದಾಗಲು ಇಂತಹದ್ದೇ ಅವಕಾಶ ಸೃಷ್ಟಿಸಿದ್ದೆ, ಅಧಿವೇಶನ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ರಾಜ್ಯಸಭೆಯಲ್ಲಿ ಮಾತನಾಡುವ ಅವಕಾಶ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಸಮಯ ಸಿಗಬಹದು ಎಂದುಕೊಂಡಿದ್ದೇನೆ. ಅವಕಾಶ ಸಿಕ್ಕರೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ ಎಂದರು.

ಸಿಎಂ ಬೊಮ್ಮಾಯಿ ಅವರು ಭೇಟಿಯಾದ ನಂತರ ಪ್ರೀತಮ್ ಗೌಡ ಅಸಮಾಧಾನ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಅಷ್ಟು ಕೆಳಮಟ್ಟಕ್ಕೆ ನನ್ನನ್ನು ಇಳಿಸಬೇಡಿ. ನೀವು ಕೂಡ ಈ ಬಗ್ಗೆ ನನ್ನಲ್ಲಿ ಮತ್ತೆ ಮತ್ತೆ ಪ್ರಶ್ನೆ ಕೇಳಬೇಡಿ, ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

- Advertisement -


ಬಿಜೆಪಿ ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಯಡಿಯೂರಪ್ಪ ಮಾರ್ಗದರ್ಶನದಿಂದ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ. ಗೊಂದಲಗಳನ್ನು ನಿಭಾಯಿಸಲು ಬೊಮ್ಮಾಯಿ ಸಮರ್ಥರಿದ್ದಾರೆ ಎಂದು ಕೊಂಡಿದ್ದೇನೆ. ಸಿನೀಯರ್ ಬೊಮ್ಮಾಯಿ ನಾನು ಉತ್ತಮ ಗೆಳೆಯರು ಎಂದು ಸ್ಮರಿಸಿಕೊಂಡರು.

Join Whatsapp