ಆಳುವ ಸರಕಾರ ಸಮಾಜವನ್ನು ಒಡೆಯುವ ವಿಚ್ಛದ್ರಕಾರಿ ಶಕ್ತಿಗಳನ್ನು ಮಟ್ಟ ಹಾಕಬೇಕು: ಬಿ.ಕೆ ಹರಿಪ್ರಸಾದ್ ಕಿಡಿ

Prasthutha|

►‘ಕಲ್ಲಡ್ಕ ಭಟ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಿ’

- Advertisement -

ಬೆಂಗಳೂರು: ಮಹಿಳೆಯರ ಬಗ್ಗೆ ಅವಾಚ್ಯವಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಿ ಎಂದು ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ʼಎಕ್ಸ್ʼ ಪೋಸ್ಟ್ ಮಾಡಿರುವ ಅವರು, ಪ್ರಭಾಕರ್ ಭಟ್ ಹೇಳಿಕೆಯನ್ನು ಅತ್ಯಂತ ಕಟು ಪದಗಳಲ್ಲಿ ಖಂಡಿಸುತ್ತೇನೆ. ಈ ಕೂಡಲೇ ಸರ್ಕಾರವೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸುತ್ತೇನೆ. ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬ ಮಹಿಳೆಯರ ಘನತೆಯನ್ನು ರಕ್ಷಿಸುವ ಹೊಣೆಗಾರಿಕೆ ಹಾಗೂ ಸರ್ವ ಜನಾಂಗದ ಶಾಂತಿಯ ತೋಟದ ಸೌಂದರ್ಯವನ್ನ ಉಳಿಸುವ ಭರವಸೆ ನೀಡಿದ್ದೇವೆ. ಅದನ್ನ ಉಳಿಸುವ ಜವಾಬ್ದಾರಿ ಮರೆಯಬಾರದುʼ ಎಂದರು.

- Advertisement -

ಆಳುವ ಸರಕಾರ, ಸಮಾಜವನ್ನು ಒಡೆಯುವ ವಿಚ್ಛದ್ರಕಾರಿ ಶಕ್ತಿಗಳನ್ನು ಮಟ್ಟ ಹಾಕಬೇಕು. ಯಾವುದೇ ರಾಜಿ ಮುಲಾಜಿಗೆ ಒಳಗಾಗದೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Join Whatsapp