Home ಟಾಪ್ ಸುದ್ದಿಗಳು ಎಸ್‌ ಜೈಶಂಕರ್‌ ಇಂದು ಶ್ರೀಲಂಕಾ ಪ್ರವಾಸ

ಎಸ್‌ ಜೈಶಂಕರ್‌ ಇಂದು ಶ್ರೀಲಂಕಾ ಪ್ರವಾಸ

ನವದೆಹಲಿ: ಎರಡನೇ ಬಾರಿಗೆ ವಿದೇಶಾಂಗ ಸಚಿವರಾದ ಎಸ್‌. ಜೈಶಂಕರ್‌ ಇಂದು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜೈಶಂಕರ್ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸತತ ಎರಡನೇ ಅವಧಿಗೆ ವಿದೇಶಾಂಗ ಖಾತೆ ಗಿಟ್ಟಿಸಿಕೊಂಡ ನಂತರದ ಮೊದಲ ದ್ವಿಪಕ್ಷೀಯ ಭೇಟಿಯ ಪ್ರವಾಸ ಇದಾಗಿದೆ.

ಜೈಶಂಕರ್‌ ಶ್ರೀಲಂಕಾ ಪ್ರವಾಸ ‘ನೆರೆಯವರೇ ಮೊದಲು’ ಎಂಬ ಭಾರತದ ನೀತಿಯ ಭಾಗವಾಗಿದೆ. ಉಭಯರಾಷ್ಟ್ರಗಳ ದ್ವಿಪಕ್ಷೀಯ ಬಾಂಧವ್ಯದ ಪ್ರತೀಕವಾಗಿದೆ. ಭೇಟಿಯ ವೇಳೆ ಜೈಶಂಕರ್‌ ಹಲವು ವಿಚಾರಗಳ ಕುರಿತಂತೆ ಶ್ರೀಲಂಕಾದ ಉನ್ನತ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಈ ಭೇಟಿಯು ಉಭಯ ರಾಷ್ಟ್ರಗಳ ಸಂಪರ್ಕ ಯೋಜನೆ ಹಾಗೂ ಸಹಕಾರ ಯೋಜನೆಗಳಿಗೆ ವೇಗ ನೀಡಲಿದೆ ಎಂದು ವಿದೇಶಾಂಗ ಇಲಾಖೆಯ ಪ್ರಕಟಣೆ ತಿಳಿಸಿದೆ.

Join Whatsapp
Exit mobile version