ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ರೌಡಿ ಶೀಟರ್ ಮೃತದೇಹ ಪತ್ತೆ

Prasthutha|

ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ಶೂ ಲೇಸ್​ನಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ರೌಡಿ ಶೀಟರ್ ಮೃತದೇಹ ಪತ್ತೆಯಾಗಿದೆ.

- Advertisement -

 ಸುನೀಲ್ ಮೃತ ರೌಡಿ ಶೀಟರ್. ಈತನ ಸಾವು ಇದೀಗ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಸುನಿಲ್ ಇನ್ನು ಹತ್ತು ದಿನಗಳಲ್ಲಿ ಅಂದರೆ ಜೂನ್​2 ಕ್ಕೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ. ​ ಸುನೀಲ್​ ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ.

- Advertisement -

​ ಕೆಲ ದಿನಗಳ ಹಿಂದೆ ತನ್ನನ್ನು ಕೊಲೆ ಮಾಡಲು ಸ್ಕೆಚ್ ಹಾಕಲಾಗಿದೆ ಎಂದು ಹೆಳಿಕೊಂಡಿದ್ದ ಸುನಿಲ್ ಮೃತದೇಹ ಶೌಚಾಲಯದಲ್ಲಿ ಪತ್ತೆಯಾಗಿದೆ. ಸುನಿಲ್’ನಿಂದ ಕೊಲೆಯಾಗಿದ್ದ ವಿನೋದ್ ಮಾಜಿ ಕಾರ್ಪೊರೇಟರ್ ಓರ್ವರ ಅಣ್ಣನ ಮಗನಾಗಿದ್ದ. ಇವೆಲ್ಲವನ್ನೂ ನೋಡುತ್ತಿದ್ದರೆ ರೌಡಿಶೀಟರ್​ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.

 ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಸುನಿಲ್ ಸಾವಿಗೆ ನಿಜವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

Join Whatsapp