ಮಾಲೆಂಗಾವ್ ಸ್ಪೋಟದ ಆರೋಪಿ ಸಾದ್ವಿ ಪ್ರಜ್ಞಾ ಸಿಂಗ್ ಮತ್ತೆ ಆಸ್ಪತ್ರೆಗೆ ದಾಖಲು । ತಿಂಗಳೊಳಗೆ ಇದು ಮೂರನೇ ಬಾರಿ !

Prasthutha|

- Advertisement -

ಮಾಲೆಂಗಾವ್ ಸ್ಪೋಟದ ಪ್ರಮುಖ ಆರೋಪಿ ಮತ್ತು ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ತೀವ್ರ ಉಸಿರಾಟದ ತೊಂದರೆಯಿಂದ ಮರಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಂದು ತಿಂಗಳೊಳಗೆ ಇದು ಮೂರನೇಯ ಬಾರಿ ಪ್ರಜ್ಞಾ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡುತ್ತಿದ್ದು, ಚಿಕಿತ್ಸೆಗಾಗಿ ಇಂದು ಮುಂಬೈಗೆ ವಿಮಾನದಲ್ಲಿ ಕರೆದೊಯ್ಯಲಾಗಿದೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೊದಲು ಕೋವಿಡ್ ಗುಣಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಗೆ ಕರೆದೊಯಲಾಗಿತ್ತು. ಫೆಬ್ರವರಿ 19 ಕ್ಕೆ ಎರಡನೇ ಬಾರಿ ದಾಖಲು ಮಾಡಲಾಗಿದೆ. ಈಗ ಮತ್ತೊಮ್ಮೆ ತೀವ್ರ ಉಸಿರಾಟದ ತೊಂದರೆಯಿಂದ ಸಂಸದೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

2008 ರ ಮಾಲೆಗಾಂವ್ ಬಾಂಬ್ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು. ಆ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್ ಅವರಿಗೆ ಆರೋಗ್ಯ ಕಾರಣಗಳಿಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ 2017 ರಲ್ಲಿ ಜಾಮೀನು ನೀಡಿತ್ತು. ಭಯೋತ್ಪಾದಕ ಪ್ರಕರಣದ ಆರೋಪಿರೋರ್ವ ಭಾರತದ ಸಂಸದನಾಗಿರುವುದು ಇದೇ ಮೊದಲಾಗಿದೆ.

Join Whatsapp