ಕೇಸರಿ ಶಾಲು, ಸ್ಕಾರ್ಫ್ ವಿವಾದ: ಪೋಷಕರ ಸಭೆಗೆ ನಿರ್ಧಾರ

Prasthutha|

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಸರಿ ಶಾಲು, ಸ್ಕಾರ್ಫ್ ವಿವಾದ ಮಂಗಳವಾರವೂ ಮುಂದುವರಿದಿದ್ದು, ಇಂದು ಕೂಡಾ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಮನವೊಲಿಸಿದ ಪ್ರಾಂಶುಪಾಲರು, ಜನವರಿ 10 ರಂದು ಪೋಷಕರ ಸಭೆ ನಡೆಸುವ ಭರವಸೆ ನೀಡಿದ್ದಾರೆ.

ಜನವರಿ 10ರಂದು ಕಾಲೇಜಿಗೆ ರಜೆ ನೀಡಿ ಪೋಷಕರ ಸಭೆ ನಡೆಸಲಾಗುವುದು. ಶಾಲಾ  ಆಡಳಿತ ಮಂಡಳಿ ಮತ್ತು ಪೋಷಕರ ಸಭೆಯಲ್ಲಿ ಸಮವಸ್ತ್ರದ ಕುರಿತು ಮಾತನಾಡಲಾಗುವುದು ಎಂದು ಪ್ರಾಂಶುಪಾಲರು ಹೇಳಿದ್ದಾರೆ.

Join Whatsapp