ಜಿಂಕೆ ಮಾಂಸ ಮಾರಾಟ; ಆರೋಪಿಗೆ ನ್ಯಾಯಾಂಗ ಬಂಧನ

Prasthutha|

ಶಿವಮೊಗ್ಗ: ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.

- Advertisement -

ತಟ್ಟೇಹಳ್ಳಿ ಗ್ರಾಮದ ರಾಕೇಶ್ ನಾಯ್ಕ (24) ಬಂಧಿತ ಆರೋಪಿ. ತಾಲೂಕಿನ ಮಾರ್ಕಾಂಡಯ್ಯ ಅರಣ್ಯ ಪ್ರದೇಶದಲ್ಲಿ ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ  ಖಚಿತ ಮಾಹಿತಿಯ ಮೇರೆಗೆ ಬಂಧಿಸಲಾಗಿದೆ.

ಉಳಿದ ಮೂರು ಆರೋಪಿಗಳು ಪರಾರಿಯಾಗಿದ್ದು,  ಬಂಧಿತ ರೋಪಿಯಿಂದ ಸಿಂಗಲ್ ಬ್ಯಾರಲ್ ಗನ್, 2 ಕೆ.ಜಿ. ಜಿಂಕೆ ಮಾಂಸ, ತಕ್ಕಡಿ ಹಾಗೂ ಮಾಂಸ ಕತ್ತರಿಸಲು ಉಪಯೋಗಿಸುತ್ತಿದ್ದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ಜಿ. ಗೋಪ್ಯಾನಾಯ್ಕ್ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಉಪವಲಯ ಅರಣ್ಯಾಧಿಕಾರಿ ಹರೀಶ್, ಆಂಜನೇಯ, ಅರಣ್ಯ ರಕ್ಷಕ ಮುತ್ತಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.



Join Whatsapp