ಮುಖ್ಯಮಂತ್ರಿ ಮನೆ ಬಳಿ ಗಾಂಜಾ ಮಾರಾಟ| ಬಂಧಿತ ಪೇದೆಗಳ ವಿರುದ್ಧ ಮತ್ತೊಂದು ‌ಕೇಸ್

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್ ಟಿ ನಗರದ ನಿವಾಸದ ಮುಂದೆಯೇ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ.

- Advertisement -


ಪ್ರಕರಣ ಹಳೆಯದೇ ಆದರೂ ಮಾದಕ ವಸ್ತು ಅಪರಾಧದಲ್ಲಿ ಈ ಹಿಂದೆಯೂ ಇವರ ಹಸ್ತಕ್ಷೇಪ ಇರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮತ್ತೊಂದು ಕೇಸ್ ದಾಖಲಿಸಲಾಗಿದೆ.
ಮುಖ್ಯಮಂತ್ರಿ ನಿವಾಸದ ಬಳಿ ಗಾಂಜಾ ಡೀಲ್ ಕುದುರಿಸುವ ಕೇಸ್ ನಲ್ಲಿ ಜಾಮೀನು ಪಡೆದಿದ್ದ ಆರೋಪಿಗಳಾದ ಶಿವಕುಮಾರ ಹಾಗೂ ಸಂತೋಷ್​ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಕೋರಮಂಗಲ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ಬೆದರಿಕೆ ಪ್ರಕರಣ ದಾಖಲಾಗಿದೆ.


ಆರ್ ಟಿ ನಗರ ಠಾಣೆಯಲ್ಲಿ ಬಂಧನವಾಗಿದ್ದ ಪೊಲೀಸ್ ಕಾನ್ಸ್​ಟೇಬಲ್​​ಗಳಾದ ಶಿವಕುಮಾರ್ ಹಾಗೂ ಸಂತೋಷ್ ನೋವ್ಕಾರ್ ಕೋರಮಂಗಲ ಠಾಣೆಯ ಪೊಲೀಸ್ ಸಿಬ್ಬಂದಿ. ಗಾಂಜಾ ಪ್ರಕರಣದಲ್ಲಿ ಅಖಿಲ್ ರಾಜ್ ಹಾಗೂ ಅಮ್ಜದ್ ಜೊತೆ ಈ ಇಬ್ಬರು ಪೊಲೀಸ್ ಸಿಬ್ಬಂದಿ ಬಂಧಿತರಾಗಿದ್ದರು.

- Advertisement -


ಹಸ್ತಕ್ಷೇಪ ಪತ್ತೆ:

ಆಡುಗೋಡಿಯ ಆಟೋ ಚಾಲಕ ಇಲಿಯಾಸ್ ರಿಂದ ಕೋರಮಂಗಲ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ದೂರು ನೀಡಲಾಗಿದೆ. ಕಳೆದ ಅಕ್ಟೋಬರ್ 25 ರಂದು ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಬಳಿ ಆಟೋ ಚಾಲಕ ಇಲಿಯಾಸ್ ಹಾಗೂ ಆತನ ಸ್ನೇಹಿತ ಸೈಯದ್ ಗಾಂಜಾ ಸೇವನೆ ಮಾಡುತ್ತಿದ್ದಾಗ ಶಿವಕುಮಾರ್ ಹಾಗೂ ಸಂತೋಷ್ ಇಲಿಯಾಸ್ ನನ್ನು ಹಿಡಿದಿದ್ದರು. ಗಾಂಜಾ ತುಂಬಿದ್ದ ಮೂರು ಸಿಗರೇಟನ್ನು ವಶಕ್ಕೆ ತೆಗೆದುಕೊಂಡಿದ್ದ ಇವರಿಬ್ಬರೂ ಬರೋಬ್ಬರಿ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು ಇಲ್ಲದಿದ್ದರೆ ಗಾಂಜಾ ಮಾರಾಟದ ಕೇಸ್ ದಾಖಲಿಸುವ ಬೆದರಿಕೆ ಒಡ್ಡಿದ್ದರು.


ಪ್ರಕರಣದಲ್ಲಿ ಬೆದರಿದ ಆಟೋ ಚಾಲಕ ಇಲಿಯಾಸ್​, ನನ್ನ ಕೈಲಿ ಒಂದು ಲಕ್ಷ ಕೊಡುವುದಕ್ಕೆ ಆಗಲಿಲ್ಲ. ಹಾಗಾಗಿ 5 ಸಾವಿರ ರೂ ಕೊಟ್ಟು ಸುಮ್ಮನಾಗಿದ್ದೆ. ಇದೀಗ ಶಿವಕುಮಾರ್ ಹಾಗೂ ಸಂತೋಷ್ ಬಂಧನ ವಾಗಿರುವುದು ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಇಲಿಯಾಸ್​ ವಿರುದ್ಧ ಗಾಂಜಾ ಸಿಗರೇಟ್​ ಸಂಬಂಧ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ.

Join Whatsapp