ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದಿಂದ ಬೃಹತ್ ಪ್ರತಿಭಟನೆ 

Prasthutha|

ಲಕ್ನೋ:  ಬೆಲೆ ಏರಿಕೆ ಮತ್ತು ಇತರ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ ಇತರ ನಾಯಕರು ಸೋಮವಾರ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ವಿರುದ್ಧ ತಮ್ಮ ಪಕ್ಷದ ಕಚೇರಿಯಿಂದ ರಾಜ್ಯ ವಿಧಾನಸಭೆಗೆ ಮೆರವಣಿಗೆ ನಡೆಸಿದರು.

- Advertisement -

ಈ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು.

ಇಂದು ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗುವ ಮೊದಲು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ ಅನೇಕ ಶಾಸಕರು ಮತ್ತು ನಾಯಕರು ಪಕ್ಷದ ಕಚೇರಿಯಿಂದ ವಿಧಾನಸಭೆಯವರೆಗೆ ಮೆರವಣಿಗೆ ನಡೆಸಿದರು.

- Advertisement -

ಬಿಜೆಪಿ ಸರ್ಕಾರವು “ಸೇಡಿನ ಮನಸ್ಥಿತಿ”ಯೊಂದಿಗೆ ಕೆಲಸ ಮಾಡುತ್ತಿರುವುದರಿಂದ ಸಾಮಾಜಿಕ ಸಾಮರಸ್ಯವು ಅಪಾಯದಲ್ಲಿದೆ. ಪ್ರಜಾಪ್ರಭುತ್ವದ ಮನೋಭಾವಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ “ದ್ವೇಷದ ರಾಜಕೀಯ” ಮಾಡುತ್ತಿದೆ ಎಂದು ಅವರು ಆರೋಪಿಸಿದರು.

“ಸಾರ್ವಜನಿಕ ಹಿತಾಸಕ್ತಿಯ ವಿವಿಧ ವಿಷಯಗಳ ಬಗ್ಗೆ ಪ್ರತಿಭಟಿಸಲು ನಾವು ಇಲ್ಲಿಗೆ ಬಂದಿದ್ದೇವೆ. ಇದು ನಮ್ಮ ಸಾಂವಿಧಾನಿಕ ಹಕ್ಕು, ಆದರೆ ಬಿಜೆಪಿ ಶಾಸಕರನ್ನು ವಿಧಾನಸಭೆಗೆ ಹೋಗಲು ಬಿಡುತ್ತಿಲ್ಲ” ಎಂದು ಪಕ್ಷದ ನಾಯಕರೊಬ್ಬರು ಹೇಳಿದರು.

ಅಖಿಲೇಶ್ ಯಾದವ್ ನೇತೃತ್ವದ ಪ್ರತಿಭಟನೆಗೆ ತಿರುಗೇಟು ನೀಡಿರುವ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಈ ಪಾದಯಾತ್ರೆಯು ಸಾಮಾನ್ಯ ಜನರ ಪ್ರಯೋಜನಕ್ಕೆ ಸಂಬಂಧಿಸಿದ್ದಲ್ಲ ಎಂದು ಹೇಳಿದ್ದಾರೆ.



Join Whatsapp