ದಲಿತ ಮಹಿಳೆ ಭೂಮಿ ಮರಳಿಸುವಂತೆ ಆಗ್ರಹಿಸಿ ಆರ್ಟ್ ಆಫ್ ಲೀವಿಂಗ್ ಆಶ್ರಮದ ಮುಂದೆ ಸಮತಾ ಸೈನಿಕ ದಳದಿಂದ ಬೃಹತ್ ಪ್ರತಿಭಟನೆ

Prasthutha|

ಬೆಂಗಳೂರು: ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರು ದಲಿತ ವೃದ್ಧ ಮಹಿಳೆಯ ಎರಡು ಎಕರೆ ಭೂಮಿ ಕಬಳಿಸಿದ್ದು, ಇದನ್ನು ಮರಳಿಸುವಂತೆ ಆಗ್ರಹಿಸಿ ಸಮತಾ ಸೈನಿಕ ದಳ ಭಾರೀ ಪ್ರತಿಭಟನೆ ನಡೆಸಿತು.

- Advertisement -

ಸಮತಾ ಸೈನಿಕ ದಳದ ರಾಷ್ಟ್ರೀಯ ಅಧ್ಯಕ್ಷ ಎಂ. ವೆಂಕಟಸ್ವಾಮಿ ಸ್ವಾಮಿ ನೇತೃತ್ವದಲ್ಲಿ ಕನಕಪುರ ರಸ್ತೆಯ ಉದಿಪಾಳ್ಯ ಆಶ್ರಮದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಂ.ವೆಂಕಟಸ್ವಾಮಿ, ರವಿಶಂಕರ್ ಗುರೂಜಿ ಅವರಿಗೆ ದಲಿತರು, ಶೋಷಿತರ ಪರವಾಗಿ ಕಾಳಜಿ ಇಲ್ಲ. ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಇದನ್ನು ವಿರೋಧಿಸಿ ನ್ಯಾಯ ಸಿಗುವ ತನಕ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

- Advertisement -

ದಲಿತ ಮಹಿಳೆಗೆ ಸೇರಿದ ಎರಡು ಎಕರೆ ಭೂಮಿ ಕಬಳಿಸಿದ್ದು, ಇದನ್ನು ವಿರೋಧಿಸಿ ಕನಕಪುರ ರಸ್ತೆಯ ಉದಿಪಾಳ್ಯ ಆಶ್ರಮದ ಮುಂದೆ ಇದೇ 29 ರಂದು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಸುವುದಾಗಿ ಸಮತಾ ಸೈನಿಕ ದಳ ಎಚ್ಚರಿಕೆ ನೀಡಿದೆ.

ರವಿಶಂಕರ್ ಆಶ್ರಮದಿಂದ ಲಕ್ಷ್ಮೀಪುರದ ದಿವಂಗತ ಹನುಮಯ್ಯನ ಹೊಣೆಯ 70 ವರ್ಷ ವಯೋವೃದ್ಧ ದಲಿತ ಮಹಿಳೆ ರಂಗಮ್ಮನಿಗೆ ಸೇರಿರುವ ಸರ್ವೇ ನಂ 132/62 ರ 2 ಎಕರೆ ಜಮೀನನ್ನು ಬೇನಾಮಿ ಹೆಸರುಗಳ ನಕಲಿ ದಾಖಲೆ ಸೃಷ್ಠಿಸಿ ಆಶ್ರಮ ಕಬಳಿಸಿದ್ದು, ಈ ಭೂಮಿಯನ್ನು ಕೂಡಲೇ ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು.

Join Whatsapp