NCB ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಕ್ರಮಕ್ಕೆ ಕೇಂದ್ರ ಆದೇಶ

Prasthutha|

ನವದೆಹಲಿ: NCB ಯ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಣಕಾಸು ಸಚಿವಾಲಯಕ್ಕೆ ಕೇಂದ್ರ ಸರ್ಕಾರ ಆದೇಶ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

- Advertisement -

ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಮತ್ತು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಆರೋಪವನ್ನು ಎದುರಿಸುತ್ತಿರುವ ಸಮೀರ್ ವಾಂಖೆಡೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಆದೇಶ ನೀಡಿದೆ.

ಸಮೀರ್ ವಾಂಖೆಡೆ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಮಗ ಆರ್ಯನ್ ಅವರನ್ನು ಬಂಧಿಸಿದ್ದರು.

- Advertisement -

ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಶಾರುಖ್ ಮಗ ಆರ್ಯನ್ ಖಾನ್ ಅವರನ್ನು ಆರೋಪ ಮುಕ್ತಗೊಳಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಈ ಆದೇಶ ಹೊರಬಿದ್ದಿರುವುದು ಅಚ್ಚರಿ ಮೂಡಿಸಿದೆ

Join Whatsapp