“ನನ್ನ ಅಣ್ಣನ ಈ ಪರಿಸ್ಥಿತಿಗೆ ನವೀನ್ ಕಾರಣ”: ಸಂಚಾರಿ ವಿಜಯ್ ಸಹೋದರನಿಂದ ದೂರು ದಾಖಲು

Prasthutha|

ಬೆಂಗಳೂರು: ಸಂಚಾರಿ ವಿಜಯ್ ಬೈಕ್ ಅಪಘಾತದಿಂದ ಈ ಪರಿಸ್ಥಿತಿಗೆ ತಲುಪಲು ಬೈಕ್ ಚಲಾಯಿಸುತ್ತಿದ್ದ ನವೀನ್ ಕಾರಣನಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಚಾರಿ ವಿಜಯ್ ಸಹೋದರ ಸಿದ್ದೇಶ್ ಜಯನಗರ ಸಂಚಾರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  
ನವೀನ್ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದಲೇ ಬೈಕ್ ಸ್ಕಿಡ್ ಆಗಿ ಅಪಘಾತವಾಗಿದೆ. ಆದ್ದರಿಂದ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿದ್ದೇಶ್ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

ಶನಿವಾರ ತಡರಾತ್ರಿ ಜೆಪಿ ನಗರದಲ್ಲಿ ನಡೆದಿದ್ದ ಬೈಕ್ ಅಪಘಾತದ ಸಂದರ್ಭ ಸಂಚಾರಿ ವಿಜಯ್ ಸ್ನೇಹಿತ ನವೀನ್ ಬೈಕ್ ಓಡಿಸುತ್ತಿದ್ದರು ಎನ್ನಲಾಗಿದೆ. ಜೆಪಿ ನಗರದ 7ನೇ ಹಂತದಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕಿಡ್ ಆಗಿದ್ದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದ ಸಂಚಾರಿ ವಿಜಯ್ ಅವರಿಗೆ ತಲೆ ಹಾಗೂ ತೊಡೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದವು. ವಿಜಯ್ ಅವರ ಸ್ನೇಹಿತ ನವೀನ್ ಗೂ ಬೆನ್ನು ಮೂಳೆಗೆ ತೀವ್ರ ತರಹದ ಗಾಯಗಳಾಗಿವೆ ಎನ್ನಲಾಗಿದೆ.

ವಿಜಯ್ ಸಹೋದರ ಸಿದ್ದೇಶ್ ದೂರಿನನ್ವಯ ಜಯನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Join Whatsapp