Home ಟಾಪ್ ಸುದ್ದಿಗಳು ಪ್ರಾಸಿಕ್ಯೂಷನ್’ಗೆ ಅನುಮತಿ: ಸಿಎಂ ತವರಲ್ಲಿ ಕಟ್ಟೆಯೊಡೆದ ಆಕ್ರೋಶ

ಪ್ರಾಸಿಕ್ಯೂಷನ್’ಗೆ ಅನುಮತಿ: ಸಿಎಂ ತವರಲ್ಲಿ ಕಟ್ಟೆಯೊಡೆದ ಆಕ್ರೋಶ

►ರಾಜ್ಯಪಾಲರ ಪೋಸ್ಟರ್’ಗೆ ಬೆಂಕಿ


ಮೈಸೂರು: ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಬೆನ್ನಲ್ಲೇ, ಸಿದ್ದರಾಮಯ್ಯ ತವರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಕಟ್ಟೆಯೊಡೆದಿದೆ.


ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಪ್ರತಿಭಟನೆಗಳು ನಡೆದಿವೆ.


ಮೈಸೂರಿನ ಅಹಿಂದ ಸಂಘಟನೆಗಳು ಸಿಎಂ ಪರವಾಗಿ ಬೀದಿಗೆ ಇಳಿದವು. ಮೈಸೂರು ನ್ಯಾಯಾಲಯದ ಮುಂಭಾಗ ‘ಗೋ ಬ್ಯಾಕ್ ರಾಜ್ಯಪಾಲ’ ಎಂಬ ಪ್ರತಿಭಟನೆ ನಡೆಸಿದರು. ಈ ವೇಳೆ ಟೈರ್ ಗೆ ಬೆಂಕಿ ಹಚ್ಚಿ ರಾಜ್ಯಪಾಲರ ಪೋಸ್ಟರ್ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.


ಪ್ರತಾಪ್ ಸಿಂಹ ಮಾಧ್ಯಮಗಳ ಮುಂದೆ ಮಾತಾಡುವಾಗ ಆಕಸ್ಮಿಕವಾಗಿ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಬಂದು ಬಿಜೆಪಿ ನಾಯಕನ ಎದುರೆ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು.

Join Whatsapp
Exit mobile version