Home ಟಾಪ್ ಸುದ್ದಿಗಳು ಕ್ರೈಸ್ತ ಧಾರ್ಮಿಕ ಗ್ರಂಥಗಳಿಗೆ ಬೆಂಕಿ ಹಚ್ಚಿದ ಸಂಘಪರಿವಾರದ ಕಾರ್ಯಕರ್ತರು!

ಕ್ರೈಸ್ತ ಧಾರ್ಮಿಕ ಗ್ರಂಥಗಳಿಗೆ ಬೆಂಕಿ ಹಚ್ಚಿದ ಸಂಘಪರಿವಾರದ ಕಾರ್ಯಕರ್ತರು!

ಕೋಲಾರ: ಕ್ರೈಸ್ತರ ಧಾರ್ಮಿಕ ಗ್ರಂಥಗಳಿಗೆ ಸಂಘಪರಿವಾರದ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ಕೋಲಾರದ ಶ್ರೀನಿವಾಸಪುರದಲ್ಲಿ ನಡೆದಿದೆ.


ಶ್ರೀನಿವಾಸಪುರ ಪಟ್ಟಣದ ಮೋತಿಲಾಲ್ ರಸ್ತೆಯಲ್ಲಿನ ಮಹಿಳೆಯೊಬ್ಬರ ಮನೆಯಲ್ಲಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಕ್ರೈಸ್ತ ಧಾರ್ಮಿಕ ಗ್ರಂಥಗಳನ್ನು ರಸ್ತೆಗೆ ಎಸೆದು ಬೆಂಕಿ ಹಚ್ಚಲಾಗಿದೆ.

ಕ್ರಿಶ್ಚಿಯನ್ ಧರ್ಮಕ್ಕೆ ಬಲಬಂತದ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಾಲ್ವರು ಕ್ರಿಶ್ಚಿಯನ್ ಧರ್ಮ ಪ್ರಚಾರಕರನ್ನು ಪೊಲೀಸರು ಬಂಧಿಸಿದ್ದರು.

ಕಳೆದ 12 ತಿಂಗಳಲ್ಲಿ ಕರ್ನಾಟಕದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಸತತ 38 ದಾಳಿಗಳಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರಕಾರವು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Join Whatsapp
Exit mobile version