Home ಟಾಪ್ ಸುದ್ದಿಗಳು ನಿರ್ಮಾಣ ಹಂತದ ಮಸೀದಿಯನ್ನು ಧ್ವಂಸಗೊಳಿಸಿದ ಸಂಘಪರಿವಾರದ ಕಾರ್ಯಕರ್ತರು

ನಿರ್ಮಾಣ ಹಂತದ ಮಸೀದಿಯನ್ನು ಧ್ವಂಸಗೊಳಿಸಿದ ಸಂಘಪರಿವಾರದ ಕಾರ್ಯಕರ್ತರು

ಲಕ್ನೋ: ನಿರ್ಮಾಣ ಹಂತದ ಮಸೀದಿಯೊಂದನ್ನು ವಿಶ್ವ ಹಿಂದೂ ಪರಿಷತ್-ವಿಎಚ್’ಪಿ ಮತ್ತು ಬಜರಂಗ ದಳದ ಗೂಂಡಾಗಳು ಧ್ವಂಸಗೊಳಿಸಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ.


ಈ ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಏಕಾಏಕಿ ಪ್ರವೇಶಿಸಿ ಧ್ವಂಸಗೊಳಿಸಿದ್ದಾರೆ.


ನಗರದ ಬಾಲ್ಖಂಡಿ ನಾಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನೂರಾರು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮಸೀದಿ ನಿರ್ಮಾಣ ಕಾರ್ಯದ ಸಮಯದಲ್ಲಿ ಇದ್ದಕ್ಕಿದ್ದಂತೆ ಬೈಕ್ ಗಳಲ್ಲಿ ಬಂದು ನಿರ್ಮಾಣ ಕಾರ್ಯವನ್ನು ನಿಲ್ಲಿಸಿ ಧ್ವಂಸ ಮಾಡಿದ್ದಾರೆ.


ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸಂಘಪರಿವಾರದ ಕಾರ್ಯಕರ್ತರನ್ನು ತಡೆಯದೇ ಅಸಹಾಯಕರಾಗಿ ನಿಂತುಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿದ್ದು, ಪೊಲೀಸರು ಸಂಘಪರಿವಾರದ ಕಾರ್ಯಕರ್ತರನ್ನು ತಡೆಯದೇ ಮೂಕ ಪ್ರೇಕ್ಷಕರಂತೆ ವರ್ತಿಸಿದ್ದಾರೆ ಎಂದು ದೂರಿದ್ದಾರೆ.

https://twitter.com/AhmedKhabeer_/status/1626088004317220865?s=20
Join Whatsapp
Exit mobile version