Home ಟಾಪ್ ಸುದ್ದಿಗಳು ಗದಗ: ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿದ ಸಂಘಪರಿವಾರ !

ಗದಗ: ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿದ ಸಂಘಪರಿವಾರ !

ಗದಗ: ಕಾಂಗ್ರೆಸ್ ಕಾರ್ಯಕರ್ತನೋರ್ವನನ್ನು ಸಂಘಪರಿವಾರದ ಕಾರ್ಯಕರ್ತರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಟಗೇರಿಯ ಮಂಜುನಾಥ ನಗರದಲ್ಲಿ ನಿನ್ನೆ ಸಂಜೆ  ನಡೆದಿದೆ.

ಗಜೇಂದ್ರಸಿಂಗ್ ಎಂಬಾತನಿಗೆ ಸಂಘಪರಿವಾರದ ಕಾರ್ಯಕರ್ತರು  ಚಾಕು ಇರಿದು ಕೊಲೆ ಮಾಡಿದ್ದಾರೆಂದು ಮೃತನ ತಂದೆ ಕಿಶನ್ ಸಿಂಗ್ ಆರೋಪಿಸಿದ್ದಾರೆ.

ಶಿವರಾಜ್ ಪೂಜಾರ್ ಸಹಚರನೋರ್ವ ಓರ್ವ ಮಹಿಳೆಗೆ ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದನು ಎನ್ನಲಾಗಿದೆ. ಹೀಗಾಗಿ, ಗಜೇಂದ್ರಸಿಂಗ್ ಮೆಸೇಜ್ ಮಾಡದಂತೆ ಆ ಯುವಕನಿಗೆ ತಾಕೀತು ಮಾಡಿ ಬುದ್ಧಿ ಮಾತು ಹೇಳಿದ್ದಾನೆ. ಇದೇ ವಿಚಾರಕ್ಕೆ  ಸಣ್ಣಗೆ ಹೊತ್ತಿಕೊಂಡಿದ್ದ ಜಗಳ  ಕೊಲೆಯಲ್ಲಿ ಅಂತ್ಯವಾಗಿದೆ.‌

ಶುಕ್ರವಾರ ಮಧ್ಯಾಹ್ನ ಕೆಲಸ‌ ಮುಗಿಸಿ ಮನೆಗೆ ಹೊರಟಿದ್ದ ಗಜೇಂದ್ರ ಸಿಂಗ್​ ನಿಗೆ ರೌಡಿಶೀಟರ್ ಶಿವರಾಜ್ ಪೂಜಾರ್ ಮತ್ತು ಆತನ ಸಹಚರರು ಅಟ್ಯಾಕ್ ಮಾಡಿದ್ದಾರೆ. ಸಿಕ್ಕ ಸಿಕ್ಕಲ್ಲಿ, ಹೊಟ್ಟೆಗೆ ಚಾಕು ಇರಿದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಜೇಂದ್ರನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳಿದಿದ್ದಾರೆ.

Join Whatsapp
Exit mobile version