ರಥೋತ್ಸವದ ವೇಳೆ ಕುರ್’ಆನ್ ಪಠಣ ಮಾಡದಂತೆ ಆಗ್ರಹಿಸಿ ಸಂಘಪರಿವಾರದಿಂದ ಪ್ರತಿಭಟನೆ: ಲಾಠಿಚಾರ್ಜ್

Prasthutha|

ಹಾಸನ: ಹಾಸನ ಜಿಲ್ಲೆ ಬೇಲೂರಿನಲ್ಲಿ ಏಪ್ರಿಲ್ 4 ರಂದು ಚನ್ನಕೇಶವ ರಥೋತ್ಸವ ನಡೆಯಲಿದ್ದು, ಈ ವೇಳೆ ಬೇಲೂರಿನ ಚನ್ನಕೇಶವ ರಥೋತ್ಸವ ವೇಳೆ ಕುರ್’ಆನ್ ಪಠಣ ಮಾಡದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

- Advertisement -


ರಥೋತ್ಸವದ ವೇಳೆ ಕುರ್’ಆನ್ ಪಠಣ ಮಾಡಬಾರದು. ಕುರ್’ಆನ್ ಪಠಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ವಿಎಚ್ ಪಿ, ಬಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಯುವಕನೋರ್ವ ಕುರ್’ಆನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಇದರಿಂದಾಗಿ ವಿಎಚ್’ಪಿ ಬಜರಂಗ ದಳದ ಕಾರ್ಯಕರ್ತರು ಮತ್ತು ಮುಸ್ಲಿಂ ಯುವಕನ ನಡುವೆ ವಾಗ್ವಾದ ನಡೆದಿದ್ದು ತಕ್ಷಣ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್ ಮಾಡಿದ್ದಾರೆ. ನಂತರ ಘೋಷಣೆ ಕೂಗಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Join Whatsapp