ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಅಪಘಾತ: ಯುವಕ ಸ್ಥಳದಲ್ಲೇ ಸಾವು

Prasthutha|

ಬೆಳ್ತಂಗಡಿ: ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಯುವಕನೋರ್ವ, ಕಾರು-ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ತಗಂಡಿಯ ಸಂತೆಕಟ್ಟೆ ಬಳಿ ನಡೆದಿದೆ.

- Advertisement -

ಮೃತ ಯುವಕನನ್ನು ಮಡಂತ್ಯಾರಿನ ಬಂಗೇರಕಟ್ಟೆ ನಿವಾಸಿ ಯತಿನ್ (22) ಎಂದು ಗುರುತಿಸಲಾಗಿದೆ. ಸಹ ಸವಾರ ಪ್ರದೀಪ್ ಎಂಬಾತನಿಗೆ ತರಚಿದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಳ್ತಂಗಡಿಯ ಮೇಲಂತಬೆಟ್ಟಿನಲ್ಲಿ ಸಂಘಪರಿವಾರ ಸಂಘಟನೆಗಳು ಆಯೋಜಿಸಿದ್ದ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳುವ ವೇಳೆ ಅಪಘಾತ ಸಂಭವಿಸಿದೆ.

ತಕ್ಷಣವೇ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಯತಿನ್ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಸಂಘಪರಿವಾರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

- Advertisement -

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp