Home ಕರಾವಳಿ ಮಂಗಳೂರು | ವೈದ್ಯಕೀಯ ವಿದ್ಯಾರ್ಥಿಗಳೊಡನೆ ಸಂಘಪರಿವಾರ ‘ದಾಂಧಲೆ’

ಮಂಗಳೂರು | ವೈದ್ಯಕೀಯ ವಿದ್ಯಾರ್ಥಿಗಳೊಡನೆ ಸಂಘಪರಿವಾರ ‘ದಾಂಧಲೆ’

ಮಂಗಳೂರು: ವಿಹಾರಕ್ಕೆಂದು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ಸಂಘಪರಿವಾರದ ಕಾರ್ಯಕರ್ತರು ತಡೆದು ದಾಂಧಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಸುರತ್ಕಲ್ ಟೋಲ್ ಗೇಟ್ ಬಳಿ ನಡೆದಿದೆ. ಭಾನುವಾರ ಸಂಜೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಮಲ್ಪೆ ಬೀಚ್ ಗೆ ವಿಹಾರಕ್ಕೆಂದು ವೈದ್ಯಕೀಯ ವಿದ್ಯಾರ್ಥಿಗಳಿಬ್ಬರು ಜೊತೆಯಾಗಿ ಪ್ರಯಾಣಿಸುತ್ತಿದ್ದ ಕಾರನ್ನು ತಡೆದ ಸಂಘಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ ವಿಡೀಯೋ ಸದ್ಯ ವೈರಲ್ ಆಗಿದ್ದು, ಅನೈತಿಕ ಪೊಲೀಸ್ ಗಿರಿಯ ವಿರುದ್ಧ ಜಿಲ್ಲಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಟ್ರಾಫಿಕ್ ಇನ್ಸ್ ಪೆಕ್ಟರ್ ಸಮ್ಮುಖದಲ್ಲೇ ದಾಂಧಲೆ ನಡೆಸಿದ ಕಾರ್ಯಕರ್ತರು, ತೆಡೆಯಲೆತ್ನಿಸಿದ ಪೊಲೀಸ್ ಮಾತಿಗೂ ಕ್ಯಾರೇ ಎನ್ನದೇ ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಮುಂದಾಗಿರುವ ಘಟನಾ ದೃಶ್ಯಗಳು ವೈರಲ್ ಆಗಿದೆ

Join Whatsapp
Exit mobile version