ಪ್ರಧಾನಿ ಮೋದಿ ದೈವಿ ಪುರುಷ, ಸ್ವಾಮಿ ವಿವೇಕಾನಂದರ ಪುನರ್ಜನ್ಮ ಎಂದ ಶಶಿಕಲಾ ಜೊಲ್ಲೆ !

Prasthutha|

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ದೈವಿ ಪುರುಷರಾಗಿದ್ದು, ಅವರು ಸ್ವಾಮಿ ವಿವೇಕಾನಂದರ ಪುನರ್ಜನ್ಮ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

- Advertisement -

ಶಶಿಕಲಾ ಜೊಲ್ಲೆ ಅವರ ಹೇಳಿಕೆಗೆ ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ನಗರದ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಏರ್ಪಡಿಸಿದ್ದ 42ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಹೆಸರು ನರೇಂದ್ರ ಎಂದಾಗಿತ್ತು. ಅವರನ್ನು ಚಿಕಾಗೋ ಸಮ್ಮೇಳನದಲ್ಲಿ ಕೊನೆಯಲ್ಲಿ ಕೂಡಿಸಿದ್ದರು. ಅವರ ಭಾಷಣದಿಂದ ಜಗತ್ತಿಗೆ ಭಾರತವನ್ನು ಪರಿಚಯಿಸಿದರು. ಅವರಂತೆ ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಕ್ಕೆ ಭಾರತ ಪರಿಚಯಿಸುವ ಮೂಲಕ ಗುರುವಾಗಿ ನಿಂತಿದ್ದಾರೆ ಎಂದರು.



Join Whatsapp