ಸತೀಶ್ ಜಾರಕಿಹೊಳಿ ಮಾನ ಹಾನಿ ಯತ್ನ; ಅಭಿಮಾನಿಯಿಂದ ದೂರು ದಾಖಲು

Prasthutha|

ಬೆಳಗಾವಿ:  ಅಶ್ಲೀಲ ವೆಬ್ ಸೈಟ್ ನ  ಅಶ್ಲೀಲ ವಿಡಿಯೋಗಳ ಪೋಸ್ಟ್ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿಗೆ ಕಳಂಕ ತರಲು ಯತ್ನಿಸಿರುವ ಆರೋಪ ಕೇಳಿಬಂದಿದೆ.

- Advertisement -

ಈ ಬಗ್ಗೆ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ್ ತಳವಾರ್ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.

- Advertisement -

ಸದ್ಯ ಪ್ರಕರಣ ಸಂಬಂಧ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Join Whatsapp