ಕಾಂಗ್ರೆಸ್ ಹಿನ್ನಡೆಗೆ ಸತೀಶ ಜಾರಕಿಹೊಳಿ ನಿರ್ಧಾರಗಳೇ ಕಾರಣ: ಸವದಿ ತಿರುಗೇಟು

Prasthutha|

ಬೆಳಗಾವಿ: ಲೋಕಸಭೆ ಚುನಾವಣೆ ಫಲಿತಾಂಶ ವಿಚಾರವಾಗಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಸತೀಶ್ ಜಾರಕಿಹೊಳಿ ಆರೋಪಕ್ಕೆ ಇದೀಗ ಮೌನ ಮುರಿದಿರುವ ಶಾಸಕ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬರುವುದಕ್ಕೆ ಹಲವು ಕಾರಣಗಳಿವೆ ಎಂದು ಹೇಳಿದ್ದಾರೆ.

- Advertisement -

ಅಥಣಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಆಗಲು ಸತೀಶ ಜಾರಕಿಹೊಳಿ ಕೆಲ ನಿರ್ಧಾರಗಳೇ ಕಾರಣ. ನಿರ್ವಹಣೆಯಲ್ಲಿ ಎಡವಿದ್ದಾರೆ. ಅವುಗಳನ್ನು ಬಹಿರಂಗವಾಗಿ ಹೇಳಲು ಆಗದು. ಪಕ್ಷದ ವೇದಿಕೆಯಲ್ಲಿ ಚರ್ಚಿಸುವೆ ಎಂದು ಸವದಿ ಹೇಳಿದರು. ಪಟ್ಟಣದಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೆಲ ಕ್ಷೇತ್ರಗಳಲ್ಲಿನ ಪಾರಂಪರಿಕ ಮತಗಳು ಆಯಾ ಪಕ್ಷ ಅಥವಾ ಆಯಾ ವ್ಯಕ್ತಿಗೆ ಮಾತ್ರ ಬರುತ್ತವೆ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದರು.

Join Whatsapp
Exit mobile version