ಇಂದು ಸಿಬಿಐ ಮುಂದೆ ಹಾಜರಾಗಲಿರುವ ಸತ್ಯಪಾಲ್ ಮಲಿಕ್

Prasthutha|

ನವದೆಹಲಿ: ಪುಲ್ವಾಮಾ ದಾಳಿಗೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯನ್ನು ದೂಷಿಸಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇಂದು ಸಿಬಿಐ ಮುಂದೆ ಹಾಜರಾಗಲಿದ್ದಾರೆ.

- Advertisement -


ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಸಿಬಿಐ ಇಂದು ಸತ್ಯಪಾಲ್ ಮಲಿಕ್ ಅವರ ಹೇಳಿಕೆಯನ್ನು ದಾಖಲಿಸಲಿದ್ದು, ಈ ಪ್ರಕರಣದ ಸಾಕ್ಷಿಯಾಗಿ ಹಾಜರಾಗುವಂತೆ ಮಲಿಕ್ ಅವರನ್ನು ಸಿಬಿಐ ಕೇಳಿಕೊಂಡಿದೆ.

2018 ರಲ್ಲಿ, ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ, ಅನಿಲ್ ಅಂಬಾನಿ ಅವರ ರಿಲಯನ್ಸ್ ಇನ್ಶೂರೆನ್ಸ್ ಜೊತೆಗಿನ ಸರ್ಕಾರದ ಒಪ್ಪಂದವನ್ನು ಸತ್ಯಪಾಲ್ ರದ್ದುಗೊಳಿಸಿದ್ದರು. ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮಲಿಕ್ ಆರೋಪಿಸಿದ ಹಿನ್ನೆಲೆಯಲ್ಲಿ ಸಿಬಿಐ ಪ್ರಕರಣ ದಾಖಲಿಸಿತ್ತು.

Join Whatsapp