ಸಾವರ್ಕರ್ ಬ್ರಿಟಿಷರ ಬಳಿ ಕ್ಷಮೆ ಕೇಳಿದ್ದರು: ಮಹಾತ್ಮ ಗಾಂಧಿ ಮೊಮ್ಮಗ

Prasthutha|

ಬೆಂಗಳೂರು: ಸಾವರ್ಕರ್ ಜೈಲಿನಿಂದ ಹೊರಬರಲು ಬ್ರಿಟಿಷರ ಬಳಿ ಕ್ಷಮೆ ಯಾಚಿಸಿದ್ದರು ಎಂದು ಮಹಾತ್ಮ ಗಾಂಧಿ ಅವರ ಮೊಮ್ಮಗ ತುಷಾರ್ ಗಾಂಧಿ ಪುನರುಚ್ಚರಿಸದ್ದಾರೆ.

- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಾವರ್ಕರ್ ಅವರು ಬ್ರಿಟಿಷರೊಂದಿಗೆ ಸ್ನೇಹ ಬೆಳೆಸಿದ್ದು ಸತ್ಯ. ಈ ವಿಷಯವನ್ನು ನಾವು ವಾಟ್ಸ್ ಆ್ಯಪ್ ಯೂನಿವರ್ಸಿಟಿಯಿಂದ ತೆಗೆದುಕೊಂಡಿದ್ದಲ್ಲ. ಇತಿಹಾಸದಲ್ಲಿ ಸಾಕ್ಷಿ ಇದೆ ಎಂದು ಹೇಳಿದ್ದಾರೆ.


ಪಾದಯಾತ್ರೆಗಳು ಸಂಪ್ರದಾಯದ ಭಾಗವಾಗಿದ್ದು, ಯಾತ್ರೆಗಳು ಹಲವಾರು ಕ್ರಾಂತಿಗಳಿಗೆ ಜನ್ಮ ನೀಡಿವೆ. ಇಂದು ನಮ್ಮ ದೇಶ ಪೂರ್ವಜರು ರೂಪಿಸಿದ ನೀತಿ ನಿಯಮಗಳ ವಿರುದ್ಧ ಸಾಗುತ್ತಿರುವುದನ್ನು ಕಾಣಬಹುದು. ಆದರೆ, ನಾವು ಅದಕ್ಕೆ ಅವಕಾಶ ಕೊಟ್ಟಿಲ್ಲ ಎಂದು ಜನರು ಅರಿತುಕೊಳ್ಳುವುದು ಮುಖ್ಯ ಎಂದು ತಿಳಿಸಿದ್ದಾರೆ.

Join Whatsapp